ಕನ್ನಡಪ್ರಭ ವಾರ್ತೆ ಚಳ್ಳಕೆರೆ
ದಲ್ಲಾಲರ ಸಮುದಾಯ ಭವನದಲ್ಲಿ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ತಾಲೂಕು ಘಟಕ ಹಾಗೂ ನಿವೃತ್ತ ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಶೋಷಿತ ಸಮಾಜಕ್ಕೆ ಪ್ರಜ್ವಲದ ಬೆಳಕನ್ನು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಆದರ್ಶಗಳು ಸಮಾಜಕ್ಕೆ ಶ್ರೀರಕ್ಷೆಯಾಗಿದೆ. ಯಾವುದೇ ಕಾರಣಕ್ಕೂ ಈ ಸಮುದಾಯ ಚಿಂತನೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ದಿವ್ಯಸಾನ್ನಿಧ್ಯ ವಹಿಸಿದ್ದ ಹಿರಿಯೂರು ಕೋಡಿಹಳ್ಳಿ ಆದಿಜಾಂಭವ ಶಾಖಾಮಠದ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಸಮುದಾಯದ ಕ್ರಿಯಾಶೀಲ ಚಟುವಟಿಕೆಗೆ ಕೀಳಿರಿಮೆ ಎಂದಿಗೂ ಅಡ್ಡಿಯಾಗಬಾರದು. ಇಂದಿಗೂ ಈ ಸಮುದಾಯದ ಅಸಮಾನತೆ, ಅವಮಾನದಿಂದ ಕುಗ್ಗಿದೆ. ಮುಂದಿನ ದಿನಗಳಲ್ಲಾದರೂ ಸಮುದಾಯ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಕ್ರಿಯಾಶೀಲತೆ ಹೆಚ್ಚಿಸಬೇಕು ಎಂದರು.
ಮಾದಿಗ ನೌಕರರ ಸಾಂಸ್ಕೃತಿಕ ಸಂಘ ತಾಲೂಕು ಅಧ್ಯಕ್ಷ ಡಿ.ನಾಗರಾಜ ಮಾತನಾಡಿ, ಇಂದಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ 40 ಎಸ್ಎಸ್ಎಲ್ಸಿ, 20 ಪಿಯುಸಿ ಹಾಗೂ 15 ಸಮುದಾಯದ ನಿವೃತ್ತ ನೌಕರರನ್ನು ಸನ್ಮಾನಿಸಲಾಗಿದೆ. ಪ್ರತಿಭಾ ಪುರಸ್ಕಾರದ ಮೂಲಕ ಜನಾಂಗದ ಐಕ್ಯತೆಗೆ ಪ್ರಾಮಾಣಿಕ ಪ್ರಯತ್ನ ಮುಂದುವರೆದಿದೆ. ಸಮಾಜದ ಹಲವಾರು ಸಮಸ್ಯೆಗಳನ್ನು ಎದುರಿಸಿ ಅಭಿವೃದ್ಧಿ ಪಥದತ್ತ ನಾವೆಲ್ಲರೂ ಸಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷ ಒ.ಸುಜಾತ, ಸುಮಕ್ಕ, ಕೆ.ವೀರಭದ್ರಪ್ಪ, ಎಚ್.ತಿಪ್ಪೇಸ್ವಾಮಿ, ಬಿ.ಆನಂದಕುಮಾರ್, ನಾಗರಾಜು, ಕಾವ್ಯ, ಮುಖ್ಯ ಎಂಜಿನಿಯರ್ ಕೆ.ಬಿ.ಜಗದೀಶ್, ನಿವೃತ್ತ ಎಸಿ ಎಂ.ಮಲ್ಲಿಕಾರ್ಜುನ್, ಡಿ.ದಯಾನಂದ, ಡಿ.ಟಿ.ಶ್ರೀನಿವಾಸ್, ಎಚ್.ಗುರುಮೂರ್ತಿ, ಕ್ಷೇಮಾಭಿವೃದ್ಧಿ ಸಂಘ ಗೌರವಾಧ್ಯಕ್ಷ ಟಿ.ಚೌಡಣ್ಣ, ಕಾರ್ಯದರ್ಶಿ ವೈ.ಆನಂದಮೂರ್ತಿ, ಉಪಾಧ್ಯಕ್ಷ ರಾಮಣ್ಣ, ಎಚ್.ಹನುಮಂತಪ್ಪ, ವಿಷ್ಣುವರ್ಧನ, ಎಸ್.ಬಿ.ತಿಪ್ಪೇಸ್ವಾಮಿ, ಡಿ.ಟಿ.ಹನುಮಂತರಾಯ, ಶ್ರೀನಿವಾಸ್, ಮುರಳಿ ಮುಂತಾದವರು ಭಾಗವಹಿಸಿದ್ದರು.
ಸಮುದಾಯ ಪರ ಚಿಂತನೆಗೆ ಸಹಕಾರ: ಶಾಸಕ ರಘುಮೂರ್ತಿ