ಕನ್ನಡಪ್ರಭ ವಾರ್ತೆ ಬ್ಯಾಡಗಿ
ಬುಧವಾರ ಕರ್ನಾಟಕದ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಕದರಮಂಡಲಗಿ ಗ್ರಾಮದಲ್ಲಿ ಹಳೇ ವಿದ್ಯಾರ್ಥಿಗಳು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದವರಿದ್ದಾರೆ. ಅವರೆಲ್ಲರೂ ತಾವು ಕಲಿತ ಶಾಲೆಗೆ ಸಾಧ್ಯವಾದಷ್ಟು ಧನಸಹಾಯ ಮಾಡಿದ್ದೇ ಆದಲ್ಲಿ ಸರ್ಕಾರದ ಹೊರೆ ಇಳಿಸುವುದರ ಜೊತೆಗೆ ದೇಶದಲ್ಲಿಯೇ ರಾಜ್ಯದ ಶಿಕ್ಷಣ ಇಲಾಖೆ ಮಾದರಿಯಾಗಲಿದೆ ಎಂದರು.
ಸರ್ಕಾರಿ ಶಾಲೆಗೆ ಸಾರ್ವಜನಿಕರ ಸೇವೆ ಸಣ್ಣ ವಿಷಯವಲ್ಲ. ಗ್ರಾಮದಲ್ಲಿ ₹1 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಹಳೆಯ ವಿದ್ಯಾರ್ಥಿಗಳು ಶಾಲೆಯ ಕಟ್ಟಡವನ್ನು ನಿರ್ಮಿಸಿ ಸರ್ಕಾರಕ್ಕೆ ನೀಡುವ ಮೂಲಕ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.ನಮ್ಮದು ದೊಡ್ಡ ಸಂಸಾರ ಇದ್ದಂತೆ:
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಸರ್ಕಾರದ ಹೊರೆಯನ್ನು ಇಳಿಸಿದ ಕದರಮಂಡಲಗಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ. ಇದು ದೇಶದಲ್ಲಿಯೇ ಪ್ರಥಮವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಮಾಜಿ ಶಾಸಕ ಸುರೇಶಗೌಡ ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಮುಖಂಡರಾದ ದಾನಪ್ಪ ಚೂರಿ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಪ್ರಕಾಶ ಪಟ್ಟಣಶೆಟ್ಟಿ, ಜಿಪಂ ಮಾಜಿ ಸದಸ್ಯೆ ಶಶಿಕಲಾ ಪಟ್ಟಣಶೆಟ್ಟಿ, ಪ್ರಕಾಶ ಹುಳಬುತ್ತಿ, ಕನ್ನಪ್ಪ ಛತ್ರದ, ಗ್ರಾಪಂ ಅಧ್ಯಕ್ಷೆ ಮಂಜುಳಾ ಕಾಂತೇಶ ನಾಯ್ಕರ, ಉಪಾಧ್ಯಕ್ಷೆ ತುಳಜಾ ಯಲ್ಲಪ್ಪ ಕಾಳೇರ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಬಿಇಒ ಎಸ್.ಜಿ. ಕೋಟಿ ಸ್ವಾಗತಿಸಿದರು, ಎನ್ಸಿಸಿ ಲೆಫ್ಟಿನೆಂಟ್ ಡಿ.ಬಿ. ಕುಸಗೂರ ನಿರೂಪಿಸಿದರು, ಎಸ್ಡಿಎಂಸಿ ಅಧ್ಯಕ್ಷ ಗದಿಗೆಯ್ಯ ಹಿರೇಮಠ ವಂದಿಸಿದರು.
ಕಾಗಿನೆಲೆಯಲ್ಲಿ ನಡೆದ ಕಾರ್ಯಕ್ರನಮ ನಿಗದಿತ ಅವಧಿಗಿಂತ ಹೆಚ್ಚು ಸಮಯ ತೆಗೆದುಕೊಂಡ ಹಿನ್ನೆಲೆ ಹಾಗೂ ಹೆಲಿಕಾಪ್ಟರ್ನ ವೇಳೆ ಮುಗಿದಿದ್ದರಿಂದ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ಬಳಿಕ ವೇದಿಕೆಗೂ ಆಗಮಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದರು. ಇದರಿಂದ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಬೇಸರಗೊಂಡರು.