ರಸ್ತೆ, ಸೇತುವೆ ಕಾಮಗಾರಿಗೆ ಕಾಮತ್‌ ಗುದ್ದಲಿ ಪೂಜೆ

KannadaprabhaNewsNetwork |  
Published : Sep 03, 2026, 02:45 AM IST
ರಸ್ತೆ, ಸೇತುವೆ ಕಾಮಗಾರಿಗೆ ಶಾಸಕ ವೇದವ್ಯಾಸ್‌ ಕಾಮತ್‌ ಗುದ್ದಲಿ ಪೂಜೆ ನೆರವೇರಿಸುತ್ತಿರುವುದು  | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನಲ್ಲಿ ಒಂದು ಕೋಟಿ ರು. ವಿಶೇಷ ಅನುದಾನದಲ್ಲಿ ಕಟ್ಟೆಪುಣೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನಲ್ಲಿ ಒಂದು ಕೋಟಿ ರು. ವಿಶೇಷ ಅನುದಾನದಲ್ಲಿ ಕಟ್ಟೆಪುಣೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.ಈ ಸಂದರ್ಭ ಮಾತನಾಡಿದ ಶಾಸಕರು, ಈ ಭಾಗಕ್ಕೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ಹಾಗೂ ಸೇತುವೆ ನಿರ್ಮಾಣವಾಗಬೇಕು ಎಂಬುದು ಸ್ಥಳೀಯರ ಮತ್ತು ಬಿಜೆಪಿ ಪ್ರಮುಖರ ಬಹು ವರ್ಷದ ಬೇಡಿಕೆಯಾಗಿತ್ತು. ಇಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲೋಕೋಪಯೋಗಿ ಇಲಾಖೆಯಿಂದ ಸುಮಾರು 1 ಕೋಟಿ ರು.ಗಳ ಕಾಮಗಾರಿಯನ್ನು ಈ ಭಾಗದಲ್ಲೇ ಕೈಗೆತ್ತಿಕೊಂಡಿದ್ದೇವೆ ಎಂದರು.ನಿಕಟಪೂರ್ವ ಪಾಲಿಕೆ ಸದಸ್ಯರಾದ ವೀಣಾಮಂಗಳ, ಪ್ರಮುಖರಾದ ಲಲ್ಲೇಶ್, ಕೀರ್ತೇಶ್, ರಾಮ್ ಪ್ರಸಾದ್, ಸುಜಾತ, ಪ್ರಾಣೇಶ್, ಸುರೇಂದ್ರ, ಮಧು ಕುಮಾರ್, ಸುಮತಿ, ನಾಗೇಶ್, ಸೋಹನ್, ಮೋಹನ್ ದಾಸ್ ಅಡ್ಯಂತಾಯ, ಪುಷ್ಪರಾಜ್, ಮನೋಹರ್, ಮನೋಜ್ ಪೂಜಾರಿ, ರಾಜೇಶ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಮಗಾರಿ ವಿಳಂಬ, ಕಳಪೆ ಗುಣಮಟ್ಟ: ಪೊನ್ನಣ್ಣ ಅಸಮಾಧಾನ
ಒಳಚರಂಡಿ ಜಾಲಕ್ಕೆ ಸಂಪರ್ಕ: ಡಾ. ಮಂತರ್ ಗೌಡ ಸೂಚನೆ