ಕನ್ನಡಪ್ರಭ ವಾರ್ತೆ ಮೇಲುಕೋಟೆ
ಮೇಲುಕೋಟೆಯಲ್ಲಿ ನೂತನ ನಾಡ ಕಚೇರಿ ಕಟ್ಟಡವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯರೊಂದಿಗೆ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಕಿ ಇದ್ದ 10 ಸಾವಿರ ಪ್ರಕರಣಗಳನ್ನು ಒಂದೇ ವರ್ಷದಲ್ಲಿ ಇತ್ಯರ್ಥಗೊಳಿಸಲಾಗಿದೆ. ರಾಜ್ಯಾದ್ಯಂತ ಈ ಆಂದೋಲನ ಮುಂದುವರೆಯುತ್ತದೆ ಎಂದರು.
ನಮ್ಮದು ರೈತಪರ ಸರ್ಕಾರ, ರೈತರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಜಿಲ್ಲೆಯಲ್ಲಿ ಜಮೀನು ಸರ್ವೇಗೆ ಸಂಬಂಧಿಸಿದಂತೆ ವರ್ಷಕ್ಕೆ ನೂರು 1 ರಿಂದ 5 ಸೇವೆ ಮಾಡುವುದು ಕಷ್ಟವಾಗಿತ್ತು. ಆದರೆ, ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಒಂದೇ ವಾರದಲ್ಲಿ 270ಕ್ಕೂ ಹೆಚ್ಚು ಒನ್ ಟು ಫೈ ಇತ್ಯರ್ಥ ಮಾಡಿ ಸ್ಕ್ಯಚ್ ಪೋಡಿ ಆಖಾರಬಂದ್ ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡುತ್ತಿದ್ದೇವೆ ಎಂದರು.ಜಿಲ್ಲೆಯ ಜನತೆ ಸರ್ಕಾರದೊಂದಿಗೆ ಸಹಕರಿಸಿದರೆ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಮತ್ತು ರೈತರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ವೇಗವಾಗಿ ನಡೆಯುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮ ಸೇವೆಗಳನ್ನು ನಾಡ ಕಚೇರಿ ಮೂಲಕ ಪಡೆದುಕೊಳ್ಳಬಹುದು. ರೈತರು ಏನೇ ಸಮಸ್ಯೆ ಬಂದರೂ ನನ್ನನ್ನು ಸಂಪರ್ಕಿಸಬಹುದು. ಅಧಿಕಾರಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸುವ ರೀತಿ ಕರ್ತವ್ಯ ನಿರ್ವಹಿಸಬೇಕು ಎಂದರು.