ಕನ್ನಡಪ್ರಭ ವಾರ್ತೆ ಸಿರವಾರ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ, ಪ್ರತಿಯೊಂದು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂಬುವುದೆ ಸರ್ಕಾರದ ಉದ್ದೇಶ ಎಂದು ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಕೆಕೆಆರ್ಡಿಬಿ ಅನುದಾನದ ಎಸ್ಸಿಪಿ, ಟಿಎಸ್ಪಿ ಯೋಜನೆಡಿಯಲ್ಲಿ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ , ಅಂಗನವಾಡಿ ಕೇಂದ್ರಕ್ಕೆ ಕೊಠಡಿ ನಿರ್ಮಾಣ, ತಾಲೂಕಿನ ಅತ್ತನೂರು, ಮರಾಠ, ನವಲಕಲ್ಲು, ಹುಣಚೇಡ್, ವಡವಟ್ಟಿ, ಪಟಕಮನದೊಡ್ಡಿ, ಕುರುಕುಂದಾ, ಕಸನದೊಡ್ಡಿ, ಹೀರಾ, ಹುಡಾ, ಬುದ್ಧಿನಿ, ಚಿಂಚರಕಿ, ತೊಪ್ಪಲದೊಡ್ಡಿ ಕಾಂಕ್ರೀಟ್ ರಸ್ತೆ ನಿರ್ಮಾಣ ಸೇರಿದಂತೆ ಒಟ್ಟು ₹4.37 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಶಾಸಕ ಜಿ.ಹಂಪಯ್ಯ ನಾಯಕ, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಶರಣಯ್ಯ ನಾಯಕ ಗುಡದಿನ್ನಿ, ಚಂದ್ರು ಕಳಸ, ಶ್ರೀನಿವಾಸ, ಕಿರಿಲಿಂಗಪ್ಪ ಕವಿತಾಳ, ಶಿವುಕುಮಾರ ಚುಕ್ಕಿ, ಮಲ್ಲಿಕಾರ್ಜುನ ಮಲ್ಲಟ, ರಮೇಶ ದರ್ಶನಕರ್, ಶಿವಶರಣ ಅರಕೇರಿ, ಕಲ್ಲೂರು ಬಸವರಾಜ ನಾಯಕ, ಎನ್.ರೇಣುಕಾ, ಬಸವರಾಜ ಗಡ್ಲ, ಚನ್ನಬಸವ ಗಡ್ಲ, ನಾಗೋಲಿ ಚನ್ನಪ್ಪ, ಮೌಲಾಸಾಬ್ ವರ್ಚಸ್, ಅಬ್ರಹಂ ಹೊನ್ನಟಗಿ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.