ಪ್ರತಿ ಹಳ್ಳಿಗೆ ಮೂಲ ಸೌಕರ್ಯ ಒದಗಿಸುವುದೆ ಸರ್ಕಾರದ ಉದ್ದೇಶ: ಸಚಿವ ಬೋಸರಾಜು

KannadaprabhaNewsNetwork |  
Published : Mar 04, 2024, 01:23 AM IST
02ಕೆಪಿಎಸ್ಡಬ್ಲ್ಯೂಆರ್01: | Kannada Prabha

ಸಾರಾಂಶ

ಸಿರವಾರದ ನವಲಕಲ್ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಚಿವ ಎನ್.ಎಸ್.ಬೋಸರಾಜು ಭೂಮಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಸಿರವಾರ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ, ಪ್ರತಿಯೊಂದು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂಬುವುದೆ ಸರ್ಕಾರದ ಉದ್ದೇಶ ಎಂದು ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ಅಂಗನವಾಡಿ ಕೇಂದ್ರದ ಕೊಠಡಿಗಳ ನಿರ್ಮಾಣಕ್ಕೆ ಸಚಿವ ಬೋಸರಾಜು ಮತ್ತು ಶಾಸಕ ಜಿ.ಹಂಪಯ್ಯ ನಾಯಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವ ಎನ್.ಎಸ್.ಬೋಸರಾಜು ಅವರು ಮಾತನಾಡಿದರು.

ಕೆಕೆಆರ್‌ಡಿಬಿ ಅನುದಾನದ ಎಸ್ಸಿಪಿ, ಟಿಎಸ್ಪಿ ಯೋಜನೆಡಿಯಲ್ಲಿ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ , ಅಂಗನವಾಡಿ ಕೇಂದ್ರಕ್ಕೆ ಕೊಠಡಿ ನಿರ್ಮಾಣ, ತಾಲೂಕಿನ ಅತ್ತನೂರು, ಮರಾಠ, ನವಲಕಲ್ಲು, ಹುಣಚೇಡ್, ವಡವಟ್ಟಿ, ಪಟಕಮನದೊಡ್ಡಿ, ಕುರುಕುಂದಾ, ಕಸನದೊಡ್ಡಿ, ಹೀರಾ, ಹುಡಾ, ಬುದ್ಧಿನಿ, ಚಿಂಚರಕಿ, ತೊಪ್ಪಲದೊಡ್ಡಿ ಕಾಂಕ್ರೀಟ್ ರಸ್ತೆ ನಿರ್ಮಾಣ ಸೇರಿದಂತೆ ಒಟ್ಟು ₹4.37 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಶಾಸಕ ಜಿ.ಹಂಪಯ್ಯ ನಾಯಕ, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಶರಣಯ್ಯ ನಾಯಕ ಗುಡದಿನ್ನಿ, ಚಂದ್ರು ಕಳಸ, ಶ್ರೀನಿವಾಸ, ಕಿರಿಲಿಂಗಪ್ಪ ಕವಿತಾಳ, ಶಿವುಕುಮಾರ ಚುಕ್ಕಿ, ಮಲ್ಲಿಕಾರ್ಜುನ ಮಲ್ಲಟ, ರಮೇಶ ದರ್ಶನಕರ್, ಶಿವಶರಣ ಅರಕೇರಿ, ಕಲ್ಲೂರು ಬಸವರಾಜ ನಾಯಕ, ಎನ್.ರೇಣುಕಾ, ಬಸವರಾಜ ಗಡ್ಲ, ಚನ್ನಬಸವ ಗಡ್ಲ, ನಾಗೋಲಿ ಚನ್ನಪ್ಪ, ಮೌಲಾಸಾಬ್ ವರ್ಚಸ್, ಅಬ್ರಹಂ ಹೊನ್ನಟಗಿ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಟೋ ಎಲ್‌ಪಿಜಿ ಕೊರತೆ ಇಲ್ಲ : ಗ್ರಾಹಕರ ವ್ಯವಹಾರ ಇಲಾಖೆ
ಬೆಂಗಳೂರು ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಳೆ