ಕನ್ನಡಪ್ರಭ ವಾರ್ತೆ ಸೊರಬ
ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ. ಈ ಮೂಲಕ ಶಿಕ್ಷಣ, ಕೃಷಿ, ವೈಜ್ಞಾನಿಕ, ಕೈಗಾರಿಕಾ ಕ್ಷೇತ್ರಗಳು ಅಭಿವೃದ್ಧಿ ಹೊಂದಿದವು. ಎಲ್ಲ ಧಾರ್ಮಿಕ ಹಬ್ಬಗಳಂತೆ ರಾಷ್ಟ್ರೀಯ ಹಬ್ಬಗಳು ಎಲ್ಲರ ಮನೆ- ಮನಗಳಲ್ಲಿ ಆಚರಿಸುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭ ಪೌರಕಾರ್ಮಿಕ ಎನ್.ಪ್ರಶಾಂತ್, ಬಿಳವಾಣಿ ವೀರಭದ್ರೇಶ್ವರ ಗ್ರಾಮಾಂತರ ಪ್ರೌಢಶಾಲೆ ವಿದ್ಯಾರ್ಥಿ ಮಮತಾ ಶಿವಪುರ, ಜೆಸಿಐನ ಪ್ರಶಾಂತ ದೊಡ್ಡಮನೆ, ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಶಿಕ್ಷಕ ಕೆ.ಬಿ. ಪುಟ್ಟರಾಜು, ತಹಸೀಲ್ದಾರ್ ಹುಸೇನ್ ಸರಕಾವಸ್, ಬಿಇಒ ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು. ಅನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಿವಾನಂದ ಪಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ, ತಾಲೂಕು ಪಂಚಾಯಿತಿ ಇಒ ಡಾ. ಪ್ರದೀಪ್ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ್ ಒಡೆಯರ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರ, ಪುರಸಭಾ ಸದಸ್ಯರಾದ ಎಂ.ಡಿ. ಉಮೇಶ್, ಶ್ರೀರಂಜನಿ, ಮಧುರಾಯ್ ಜಿ. ಶೇಟ್, ವೀರೇಶ್ ಮೇಸ್ತ್ರಿ, ಅನ್ಸರ್ ಅಹ್ಮದ್, ನಟರಾಜ್ ಉಪ್ಪಿನ, ಪ್ರೇಮಾ, ಸುಲ್ತಾನ ಬೇಗಂ, ಆಫ್ರಿನ್, ದೈಹಿಕ ಶಿಕ್ಷಕ ಈಶ್ವರಪ್ಪ, ವಿನೋದ್, ಸಿಆರ್ಪಿಗಳಾದ ಸುಧಾ, ಹರೀಶ್ ಇತರರಿದ್ದರು.
ಸೊರಬ ಪಟ್ಟಣದ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ, ಸನ್ಮಾನಿಸಲಾಯಿತು.