ಕನ್ನಡಪ್ರಭ ವಾರ್ತೆ ಶಿರಸಿ
ಶನಿವಾರ ನಗರದ ಶಾಸಕರ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ. ಶಿಕ್ಷಣ ಮಂತ್ರಿಗಳಾಗಿ ಜಿಲ್ಲೆಯನ್ನು ಪತಿನಿಧಿಸಿದ್ದ ಕ್ಷೇತ್ರದಲ್ಲಿ ಶಾಲೆಯ ಪರಿಸ್ಥಿತಿ ಯಾವ ರೀತಿಯಲ್ಲಿದೆ ಎಂಬುದನ್ನು ವಿಶ್ವೇಶ್ವರ ಹೆಗಡೆ ನೋಡಲಿ. ಈಗ ಶಾಲೆಯ ಕಟ್ಟಡ ದುರಸ್ತಿಗೆ ಶಾಸಕರ ಅನುದಾನ ಬಳಕೆ ಮಾಡಲಾಗುತ್ತಿದೆ. ಶೌಚಾಲಯಗಳ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನೊಬ್ಬರ ಕುರಿತು ಟೀಕೆ ಮಾಡುವ ಮೊದಲು ವಿಚಾರ ಮಾಡಬೇಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಕಳೆದ ಅವಧಿಯಲ್ಲಿ ೫ ವರ್ಷ ಅಧಿಕಾರ ನಡೆಸಿ, ಕಪ್ಪು ಚುಕ್ಕೆ ಇಲ್ಲದ ಮುಖ್ಯಮಂತ್ರಿ ಎಂದು ಜನರು ಹೇಳಿದ್ದಾರೆ. ಈ ಕಾರಣದಿಂದ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅತ್ಯಧಿಕ ಸ್ಥಾನ ನೀಡಿದ್ದಾರೆ ಎಂದು ಹೇಳಿದರು.ಮುಡಾದ ವ್ಯವಹಾರ ನಡೆಯುವ ಸಂದರ್ಭದಲ್ಲಿ ಯಾವ ಸರ್ಕಾರ ಇತ್ತು ಎಂಬುದನ್ನು ಅರಿತು ಪ್ರತಿಭಟನೆ ಮಾಡಬೇಕು. ಕಾಂಗ್ರೆಸ್ ಸರ್ಕಾರ ಮತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟನೆ ಮಾಡುವ ನೈತಿಕೆತೆ ಬಿಜೆಪಿಗೆ ಇಲ್ಲ. ಅಧಿಕಾರ ಹಾಗೂ ಹಣದ ದಾಹಕ್ಕಾಗಿ ಎಂತೆಂಥ ಹಗರಣ ಮಾಡಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋಗಿಲ್ವ? ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ. ಅನಾವಶ್ಯಕವಾಗಿ ಇಲ್ಲಸಲ್ಲದ ಆರೋಪ ಮಾಡುವುದನ್ನು ಬಿಡಲಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಲೆ ಏರಿಕೆ, ಕೇಂದ್ರದ ಬಿಜೆಪಿ ಸರ್ಕಾರದ ದರ್ಪದಿಂದ ಕಾಂಗ್ರೆಸ್ ಪರ ಜನರು ಮತ ಚಲಾಯಿಸಿ, ಪ್ರಬಲ ವಿರೋಧ ಪಕ್ಷವನ್ನಾಗಿ ಮಾಡಿದ್ದಾರೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸೋಲಿನ ಹೊಣೆಯನ್ನು ನಾವೇ ಹೊರಬೇಕಾಗಿದೆ. ಮುಂದಿನ ದಿನ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಸಭೆಯಲ್ಲಿ ಭರವಸೆ ನೀಡಿದ್ದೇನೆ. ಜನ ನೀಡಿದ ತೀರ್ಮಾನಕ್ಕೆ ನಾವು ತಲೆಬಾಗಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ, ಪ್ರಮುಖರಾದ ಎಸ್.ಕೆ.ಭಾಗ್ವತ್, ಅಬ್ಬಾಸ ತೋನ್ಸೆ, ದೀಪಕ ಹೆಗಡೆ ದೊಡ್ಡೂರು, ಜ್ಯೋತಿ ಪಾಟೀಲ ಇದ್ದರು.ಅಭಿವೃದ್ಧಿಗೆ ಬದ್ಧಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಿದ್ದೇನೆ. ನನ್ನ ಕ್ಷೇತ್ರದಲ್ಲಿ ಯಾರ ಹಸ್ತಕ್ಷೇಪಕ್ಕೂ ಅವಕಾಶವಿಲ್ಲ. ಅವಕಾಶ ನೀಡುವುದೂ ಇಲ್ಲ.
ಭೀಮಣ್ಣ ನಾಯ್ಕ, ಶಾಸಕ