ಸಾಲ ವಸೂಲಾತಿಗೆ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು

KannadaprabhaNewsNetwork |  
Published : Feb 17, 2025, 12:35 AM IST
16ಎಚ್ಎಸ್ಎನ್13 :  | Kannada Prabha

ಸಾರಾಂಶ

ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ನ್ನು ಫೆಬ್ರವರಿ ೧೨ರಿಂದ ಜಾರಿಗೊಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡುವ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ಅಧ್ಯಾದೇಶದ ಮಾರ್ಗ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಸಾಲಗಾರರು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಹೋಗಲು ಮಾನಸಿಕ ಹಿಂಸೆ ನೀಡಿದ್ದಲ್ಲಿ ಜಾಮೀನು ರಹಿತವಾದ ಪ್ರಕರಣವನ್ನು ದಾಖಲಿಸಲು ಅಧ್ಯಾದೇಶದಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ನ್ನು ಫೆಬ್ರವರಿ ೧೨ರಿಂದ ಜಾರಿಗೊಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡುವ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ಅಧ್ಯಾದೇಶದ ಮಾರ್ಗ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ ರ ಸಂಬಂಧ ಮೈಕ್ರೋ ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳು ಹಾಗೂ ಲೇವಾದೇವಿಗಾರರ ಸಭೆ ನಡೆಸಿ ಮಾತನಾಡಿದ ಅವರು ಸಾಲ ವಸೂಲಿಗೆ ಸರ್ಕಾರದ ಅಧ್ಯಾದೇಶದಲ್ಲಿರುವಂತೆ ನಿಯಮಗಳನ್ನು ತಪ್ಪದೆ ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ ನೀಡಿದರು. ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ರಲ್ಲಿ ತಿಳಿಸಿರುವಂತೆ ಜಿಲ್ಲೆಯಲ್ಲಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಲೇವಾದೇವಿಗಾರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಸಾಲ ನೀಡುವ ಸಂದರ್ಭದಲ್ಲಿ ಸಾಲಗಾರನೊಂದಿಗೆ ಸಾಲದ ಕರಾರು ಮಾಡಿಸಿಕೊಳ್ಳಬೇಕು, ಸಾಲಗಾರನಿಂದ ಯಾವುದೇ ವಸ್ತುವನ್ನು ಗಿರವಿ ಇಟ್ಟುಕೊಳ್ಳಲು ಅವಕಾಶವಿಲ್ಲ ಹಾಗೂ ಸಾಲಗಾರನಿಗೆ ವಿಧಿಸುವ ನಿಬಂಧನೆಗಳು ಕನ್ನಡದಲ್ಲಿ ನಮೂದಿಸಿ ನೀಡಬೇಕು ಎಂದು ತಿಳಿಸಿದರು.

ಸಾಲ ವಸೂಲಾತಿ ವೇಳೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆ ನೀಡುವುದು, ಸಾಲಗಾರರು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಹೋಗಲು ಮಾನಸಿಕ ಹಿಂಸೆ ನೀಡಿದ್ದಲ್ಲಿ ಜಾಮೀನು ರಹಿತವಾದ ಪ್ರಕರಣವನ್ನು ದಾಖಲಿಸಲು ಅಧ್ಯಾದೇಶದಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಹಾಗೂ ಲೇವಾದೇವಿಗಾರರು ಸಾಲಗಾರನಿಂದ ಯಾವುದೇ ರೀತಿ ಭದ್ರತೆಯನ್ನು ಕೋರುವಂತಿಲ್ಲ , ಒಂದು ವೇಳೆ ಸಾಲಗಾರನಿಂದ ಈ ಆದ್ಯಾ ದೇಶ ಜಾರಿಯಾಗುವ ಹಿಂದಿನ ದಿನದಂದು ಭದ್ರತೆಯನ್ನು ಪಡೆದಿದ್ದರೆ ಸಾಲಗಾರನ ಪರವಾಗಿ ತಕ್ಷಣದಿಂದಲೇ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದರು. ಸಾಲಗಾರನಿಗೆ ಸರ್ಕಾರದ ಯಾವುದೇ ಕಾರ್ಯಕ್ರಮದ ಅಡಿಯಲ್ಲಿ ದೊರೆಯುವ ಪ್ರಯೋಜನದ ಹಕ್ಕುಗಳು ಹಾಗೂ ಯಾವುದೇ ವಸ್ತುವನ್ನು ಸಾಲಗಾರನಿಂದ ಬಲವಂತವಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಪಡೆಯುವಂತಿಲ್ಲ ಎಂದು ಸೂಚಿಸಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಲೇವಾದೇವಿಗಾರರು ಈ ನಿಯಮಗಳನ್ನು ಉಲ್ಲಂಘಿಸಿದರೆ ಹತ್ತು ವರ್ಷಗಳವರೆಗೂ ವಿಧಿಸಬಹುದಾದ ಶಿಕ್ಷೆಗೆ ೫ ಲಕ್ಷ ರುಪಾಯಿವರೆಗೆ ವಿಸ್ತರಿಸಬಹುದಾದ ದಂಡವನ್ನು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗುವ ವರಿಗೆ ಜಾಮೀನುರಹಿತವಾಗಿರುತ್ತದೆ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಅವರು ಮಾತನಾಡಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಲೇವಾದೇವಿಗಾರರು ಈ ನಿಯಮನ್ನು ಉಲ್ಲಂಘಿಸಿದರೆ ಡಿವೈಎಸ್ಪಿ ಮೇಲಿನ ಹಂತದ ಅಧಿಕಾರಿ ಯಾವುದೇ ದೂರು ಪಡೆಯದೆ ಸುಮೊಟೋ ಪ್ರಕರಣ ದಾಖಲಿಸಬಹುದು ಎಂದು ತಿಳಿಸಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಲತಾ ಸರಸ್ವತಿ ಅವರು ಆರ್‌.ಬಿ.ಐ ಮಾರ್ಗಸೂಚಿಗಳನ್ನು ವಿವರಿಸಿದರು. ಸಹಕಾರ ಇಲಾಖೆ ಉಪ ನಿಬಂದಕರಾದ ಕಿರಣ್ ಕುಮಾರ್ ಹಾಗೂ ವಿವಿಧ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ಪ್ರಜ್ಞೆ ಮೂಡಿಸುತ್ತಿರುವ ಕನ್ನಡಪ್ರಭ
ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡಲು ಸಿದ್ಧ: ಶಾಸಕ ರವಿಕುಮಾರ್‌