ಸರ್ಕಾರದಿಂದ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ: ಕೆ.ಎಂ.ಉದಯ್

KannadaprabhaNewsNetwork |  
Published : Jul 27, 2025, 12:00 AM IST
26ಕೆಎಂಎನ್ ಡಿ14 | Kannada Prabha

ಸಾರಾಂಶ

ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡಿ ಸೌಂದರ್ಯಕರಣ ಮಾಡಲು ಶ್ರಮಿಸುವ ಪೌರ ಕಾರ್ಮಿಕರು ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.

ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್ ನಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆ ಕಾಯಂ ಪೌರ ಕಾರ್ಮಿಕರಿಗೆ ಅಂದಾಜು 1.95 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡಿ ಸೌಂದರ್ಯಕರಣ ಮಾಡಲು ಶ್ರಮಿಸುವ ಪೌರ ಕಾರ್ಮಿಕರು ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ ಎಂದರು.

ಪ್ರಸ್ತುತ 16 ಮನೆಗಳನ್ನು ಪೂರ್ಣಗೊಳಿಸಿ ವಾಸಕ್ಕೆ ನೀಡಲಾಗಿದೆ. ಉಳಿದ 7 ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಪೌರ ಕಾರ್ಮಿಕರಿಗೆ ವಿತರಣೆ ಮಾಡಲಾಗುವುದು ಎಂದರು.

ರಾಮ್ ರಹೀಂ ನಗರ, ಚನ್ನೇಗೌಡ ಬಡಾವಣೆ ನಿವಾಸಿಗಳಿಗೆ ಹಲವು ವರ್ಷಗಳಿಂದ ವಾಸವಾಗಿದ್ದಾರೆ. ಇವರಿಗೆ ಹಕ್ಕು ಪತ್ರ ನೀಡಿಲ್ಲ. ಇದಕ್ಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಈ ಬಗ್ಗೆ ತಾವು ಶೀಘ್ರದಲ್ಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪಟ್ಟಣ ವ್ಯಾಪ್ತಿಯ ತಮಿಳು ಕಾಲೋನಿ ನಿವಾಸಿಗಳನ್ನು ಸ್ಥಳಾಂತರ ಮಾಡಿ ಅವರಿಗೆ ಮೂಲ ಸೌಕರ್ಯಗಳೊಂದಿಗೆ ಚಿಂತನೆ ನಡೆಸಿದ್ದೇನೆ. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳೊಂದಿಗೆ ರೂಪುರೇಷಗಳ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.

ಈ ವೇಳೆ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ, ಇಇ ಆರ್.ಪ್ರತಾಪ್, ಎಇಇ ರಾಘವೇಂದ್ರ, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಪ್ರಮೀಳಾ, ಸಚ್ಚಿನ್, ಸುರೇಶ್ ಕುಮಾರ್, ಸುಮಿತ್ರಾ ರಮೇಶ್, ಸರ್ವಮಂಗಳ, ಕಮಲ್ ನಾಥ್, ಸಿದ್ದಮರಿ ಶಾಂತಮ್ಮ, ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ