ಕುಂದಗೋಳ:
ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬಿನ್ ಖರೀದಿ ಕೇಂದ್ರಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ರೈತರ ಬಹು ದಿನಗಳ ಬೇಡಿಕೆಯಾದ ಕೋಲ್ಡ್ ಸ್ಟೋರೇಜ್ ಸ್ಥಾಪನೆಗಾಗಿ ₹6 ಕೋಟಿ ಮಂಜೂರು ಮಾಡಲಾಗಿದೆ. ಈಗಾಗಲೇ ಇದರ ಕ್ರಿಯಾಯೋಜನೆ ತಯಾರಿಸುತಿದ್ದು, ಶೀಘ್ರವೇ ಕೆಲಸ ಆರಂಭವಾಗಲಿದೆ. ಇದು ಮೆಣಸಿನಕಾಯಿ, ಶೇಂಗಾ ಸೇರಿದಂತೆ ಇತರ ಬೆಳೆಗಳನ್ನು ಸ್ಥಳೀಯವಾಗಿಯೇ ಶೇಖರಿಸಲು ಅನುಕೂಲ ಕಲ್ಪಿಸುತ್ತದೆ. ಜತೆಗೆ ಸ್ಥಳೀಯ ಎಪಿಎಂಸಿ ಅಭಿವೃದ್ಧಿಗೆ ₹1 ಕೋಟಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.ಖರೀದಿ ಕೇಂದ್ರಗಳ ವಿಳಂಬಕ್ಕೆ ಸ್ಪಷ್ಟನೆ ನೀಡಿದ ಶಾಸಕರು, ಮಳೆಗಾಲ ಹೆಚ್ಚಾಗಿದ್ದರಿಂದ ಬೆಳೆಗಳಲ್ಲಿ ತೇವಾಂಶದ ಪ್ರಮಾಣ ಹೆಚ್ಚಾಗಿದೆ. ರೈತರ ಹಿತದೃಷ್ಟಿಯಿಂದ ಬೆಳೆಗಳು ಸರಿಯಾಗಿ ಒಣಗಿದ ನಂತರವೇ ಖರೀದಿ ಪ್ರಾರಂಭವಾಗಲಿದೆ. ಉದ್ದು ಬೆಳೆಗಾರರಿಗೆ ಪ್ರತಿ ಕ್ವಿಂಟಲ್ಗೆ ₹7,800 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದರು.
ಈ ವೇಳೆ ಸಹಕಾರಿ ಧುರೀಣ ಅರವಿಂದ ಕಟಗಿ, ಕಲ್ಯಾಣಪುರ ಅಭಿನವ ಬಸವಣ್ಣಜ್ಜನವರು, ಕೆಸಿಸಿ ಬ್ಯಾಂಕಿನ ನಿರ್ದೇಶಕ ಶಂಕರಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು: