ಕನ್ನಡಪ್ರಭ ವಾರ್ತೆ ಕೋಲಾರ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ೫ನೇ ಘಟಿಕೋತ್ಸವದಲ್ಲಿ ಮಾತನಾಡಿದ ಸಚಿವರು, ಉನ್ನತ ಶಿಕ್ಷಣದಲ್ಲಿ ಕ್ವಾಂಟಮ್ ಕಂಪ್ಯೂಟರಿಂಗ್ ಶಿಕ್ಷಣದಲ್ಲಿ ಅಗತ್ಯವಿದ್ದು, ಕಂಪ್ಯೂಟರ್ ಶಿಕ್ಷಣ ಜಾರಿಗೆ ತರಲಾಗುವುದು. ಜತೆಗೆ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಹೇಳಿದರು.ಕಾಲೇಜು ಅಭಿವೃದ್ಧಿಗೆ ₹೬೦ ಕೋಟಿ
ಅಮರಾವತಿ ಸಮೀಪ ವಿವಿಯ ಕಟ್ಟಡ ನಿರ್ಮಾಣದ ಹಂತದಲ್ಲಿ ಇದ್ದು, ರಸ್ತೆ ಅಭಿವೃದ್ಧಿಗೆ ೯ ಕೋಟಿ ಬೇಕಾಗಿದೆ, ಈ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಮಂಜೂರು ಮಾಡಿಸಲಾಗುವುದು. ನಮ್ಮ ಬೇರು ಇರೊದು ಕೋಲಾರದಲ್ಲಿ ಅದ್ದರಿಂದ ಜಿಲ್ಲೆಗೆ ಕೊಡುಗೆ ನೀಡುವ ಉದ್ದೇಶದಿಂದ ನಗರ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಕಾಲೇಜು ಅಭಿವೃದ್ಧಿಗೆ ೬೦ ಕೋಟಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಸಮಾಜಸೇವೆ ವಿಭಾಗದಿಂದ ಡಾ.ಎಚ್.ಎಸ್.ಶೆಟ್ಟಿ, ಸಂಗೀತ ರಂಗಭೂಮಿ ಕ್ಷೇತ್ರದಿಂದ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಉದ್ಯಮಶೀಲತೆ ವಿಭಾಗದಿಂದ ಬೆಂಗಳೂರಿನ ಪ್ರತಿಷ್ಠಿತ ಬ್ರಾಹ್ಮಿನ್ಸ್ ಕಾಫಿ ಬಾರ್ನ ಮಾಲೀಕ ರಾಧಾಕೃಷ್ಣ ಅಡಿಗ ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಪಿಚ್ಚಳ್ಳಿ ರೀತಿ ಸಾಧನೆ ಮಾಡಿ