ಸರ್ಕಾರಿ ಶಾಲೆ ಕೀಳರಿಮೆ ಪೋಷಕರು ತೊರೆಯಬೇಕು: ತಮ್ಮಯ್ಯ

KannadaprabhaNewsNetwork |  
Published : Jan 15, 2024, 01:47 AM IST
ಚಿಕ್ಕಮಗಳೂರಿನ ಉಪ್ಪಳ್ಳಿ ಬಡಾವಣೆಯಲ್ಲಿನ ಸರ್ಕಾರಿ ಶಾಲೆಯ ನೂತನ ಕೊಠಡಿಯನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಒದಗಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿ ಸಿದ್ದು ಆ ನಿಟ್ಟಿನಲ್ಲಿ ಶಾಲೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಗ್ಗಟ್ಟಾಗಿ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕು ಎಂದು ಶಾಸಕ ತಮ್ಮಯ್ಯ ಹೇಳಿದರು.

- ಚಿಕ್ಕಮಗಳೂರಿನ ಉಪ್ಪಳ್ಳಿ ಬಡಾವಣೆಯಲ್ಲಿ ಸರ್ಕಾರಿ ಶಾಲೆ ನೂತನ ಕೊಠಡಿಗಳ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸಿಸಿದ ಹಲವಾರು ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪೋಷಕರು ಕೀಳರಿಮೆ ತೊರೆದು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಉಪ್ಪಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಒದಗಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿ ಸಿದ್ದು ಆ ನಿಟ್ಟಿನಲ್ಲಿ ಶಾಲೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಗ್ಗಟ್ಟಾಗಿ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶ ಉಪ್ಪಳ್ಳಿ ಭಾಗಕ್ಕೆ ಬಹಳಷ್ಟು ಹೊಂದಿಕೊಳ್ಳಲಿದೆ. ಮಧ್ಯಮ ವರ್ಗದವರೇ ಹೆಚ್ಚಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಖಾಸಗೀ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ದಾಖಲಿಸ ಬೇಕು. ಜೊತೆಗೆ ಎಸ್‌ಡಿಎಂಸಿ ಸದಸ್ಯರೊಂದಿಗೆ ಚರ್ಚಿಸಿ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವ ಗುರಿ ಹೊಂದಿದೆ ಎಂದು ಹೇಳಿದರು.

ತಮ್ಮ ಅವಧಿಯೊಳಗೆ ಕ್ಷೇತ್ರದಲ್ಲಿ ಕನಿಷ್ಟ ಹತ್ತು ವ್ಯವಸ್ಥಿತ ಶಾಲೆ ಹಾಗೂ ಎರಡು ನಮ್ಮ ಕ್ಲೀನಿಕ್ ತೆರೆಯುವ ಉದ್ದೇಶ ವಿದೆ. ಜೊತೆಗೆ ಈ ಭಾಗದ ಜನಪ್ರತಿನಿಧಿಗಳ ಬೇಡಿಕೆಗನುಸಾರ ಉಪ್ಪಳ್ಳಿಗೊಂದು ನಮ್ಮ ಕ್ಲೀನಿಕ್ ತೆರೆಯಲು ಬೇಡಿಕೆಯಿರುವ ಹಿನ್ನೆಲೆಯಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

ನಗರಸಭಾ ಸದಸ್ಯ ಮುನೀರ್ ಮಾತನಾಡಿ, ಬಾಲ್ಯದಿಂದಲೇ ತಾವು ಸೇರಿದಂತೆ ಹಲವಾರು ಮಂದಿ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದು. ಅಂದಿನಿಂದ ಇಂದಿನವರೆಗೂ ನೂತನ ಕಟ್ಟಡ ನಿರ್ಮಾಣವಾಗಿರಲಿಲ್ಲ. ಹಿಂದಿನ ಶಾಲೆ ಹಾಳಾಗಿ ದ್ದರ ಹಿನ್ನೆಲೆಯಲ್ಲಿ ನೂತನ ಕೊಠಡಿ ನಿರ್ಮಿಸಿ ಸರ್ಕಾರ ಮಕ್ಕಳಿಗೆ ಅನುಕೂಲ ಕಲ್ಪಿಸಿರುವುದು ಖುಷಿಯ ಸಂಗತಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್ ಮಾತನಾಡಿ, ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ಹಾಗೂ ಕ್ರೀಡಾ ಚಟುವಟಿಕೆಗಳು ಮುಕ್ತಾಯಗೊಂಡು ಪಠ್ಯೇತರ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಲ್ಲಿ ಹೆಚ್ಚು ಅಭ್ಯಾಸಿಸಿ ಉತ್ತಮ ಅಂಕಗಳಿಸುವ ಮೂಲಕ ಶಾಲೆಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ಶಾಲೆಗೆ ಶೌಚಾಲಯ ಅವಶ್ಯವಿರುವ ಹಿನ್ನೆಲೆಯಲ್ಲಿ 12.35 ಲಕ್ಷ ರು. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ಶಾಲೆ ಹಳೆಯ ವಿದ್ಯಾರ್ಥಿ ಅನ್ಸರ್‌ ಆಲಿ ಮಾತನಾಡಿ, ಉಪ್ಪಳ್ಳಿ ಶಾಲೆಗೆ ಕಾಫಿ ಬೆಳೆಗಾರರು, ಸ್ಥಳೀಯ ಮುಖಂಡರು ಸೇರಿದಂತೆ ಹಲವಾರು ದಾನಿಗಳು ಕಂಪ್ಯೂಟರ್, ಫಿಲ್ಟರ್‌ ವಾಟರ್ಆ ಹಾಗೂ ಆರ್ಥಿಕ ಸಹಾಯ ಮಾಡಿ ಮಕ್ಕಳಿಗೆ ಅನುಕೂಲ ಮಾಡಿರುವುದು ಮರೆಯಲಾಗದ ವಿಷಯ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಖಲಂದರ್, ಶಾಲಾ ಎಸ್‌ಡಿಎಂಸಿ ಸದಸ್ಯ ಅಸೀಫ್, ಕಾಫಿ ಬೆಳೆಗಾರ ರಮೇಶ್‌ ಗೌಡ, ದಾನಿಗಳಾದ ಶಿವೇಗೌಡ, ಯುಸೂಫ್ ಹಾಜಿ, ಮುನೀರ್ ಭಾವ, ಖಲೀಂ ರಜ್ವಿ, ಹಳೇ ವಿದ್ಯಾರ್ಥಿಗಳಾದ ನಂದೀಶ್, ಸಹೀರ್ ಆಲಿ, ಜಮಾಲ್, ತನ್ವೀರ್, ಹರಿದಾಸ್, ಸುದೀಪ್, ಅನಿಲ್, ಕುಮಾರ್, ಶಾಲೆ ಮುಖ್ಯ ಶಿಕ್ಷಕ ಸೋಮಶೇಖರ್ ಹಾಜರಿದ್ದರು.

-- ಬಾಕ್ಸ್‌-- ಸಮಾಜಕ್ಕೆ ಮಾದರಿಯಾಗಿರಬೇಕುಬದುಕಿನ ಹುಟ್ಟು ಮತ್ತು ಸಾವಿನ ನಡುವೆ ಇರುವಷ್ಟು ದಿನ ಸಮಾಜಕ್ಕೆ ಮಾದರಿಯಾಗಿ ಜೀವಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು. ಸರ್ಕಾರಿ ಶಾಲೆಗಳ ಸಣ್ಣಪುಟ್ಟ ಕೊರತೆಗಳನ್ನು ನೀಗಿಸಲು ಸ್ಥಳೀಯ ದಾನಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಕೈಜೋಡಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಗತ್ಯವಾದ ಗುಣ ಮಟ್ಟದ ಕೊಠಡಿಗಳನ್ನು ಸರ್ಕಾರದಿಂದ 53 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದರು. 14 ಕೆಸಿಕೆಎಂ 1

ಚಿಕ್ಕಮಗಳೂರಿನ ಉಪ್ಪಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ನೂತನ ಕೊಠಡಿಯನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ, ಎಚ್‌ಡಿಕೆ ಜಾತಿವಾದಿಗಳಲ್ಲ, ಕುಟುಂಬವಾದಿಗಳು : ಸಿದ್ದರಾಮಯ್ಯ ತರಾಟೆ
₹5 ಅಕ್ರಮದಲ್ಲಿ ಪಾರಾಗಿದ್ದ ಲಮಾಣಿ ₹5 ಲಕ್ಷ ಕೇಸ್‌ನಲ್ಲಿ ಲೋಕಾ ಖೆಡ್ಡಾಕ್ಕೆ!