ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಫಲಿತಾಂಶ ಕುಸಿತದ ಕಾರಣ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದಾಖಲಾತಿ ಕೊರತೆಯಿಂದ ಮುಚ್ಚುತ್ತಿವೆ. ಪೋಷಕರು ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಶಾಲೆಗೆ ಬರುವವರೆಲ್ಲರೂ ರೈತರು, ಕೂಲಿ ಕಾರ್ಮಿಕರು ಮತ್ತು ಬಡವರ ಮಕ್ಕಳು. ಶಿಕ್ಷಕರಾದ ನೀವು ಬದ್ಧತೆಯಿಂದ ಕೆಲಸ ಮಾಡದೆ ಬಡವರ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿದ್ದೀರಿ ಎಂದು ದೂರಿದರು.
ಆದರೆ, ಶಾಲೆಯ ಶಿಕ್ಷಕರು ಉತ್ತಮ, ಫಲಿತಾಂಶ ನೀಡುವುದರಲ್ಲಿ ವಿಫಲರಾಗಿದ್ದಾರೆ. ಮುಖ್ಯ ಶಿಕ್ಷಕರು ಫಲಿತಾಂಶ ಕುಸಿತಕ್ಕೆ ಕಾರಣಗಳನ್ನು ಹುಡುಕಿ ಲೋಪದೋಷ ಸರಿಪಡಿಸಿಕೊಳ್ಳುವಂತೆ ಸೂಚಿಸಿದರು.ಒಂದು ದೇಶದಲ್ಲಿ ಅಭಿವೃದ್ಧಿ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸುವ ಜೊತೆಗೆ ಶೈಕ್ಷಣಿಕ ಮತ್ತು ಆರೋಗ್ಯಕರ ಸೌಲಭ್ಯ ಕಲ್ಪಿಸಿ ಗಟ್ಟಿಗೊಳಿಸುವುದಾಗಿದೆ. ಇದನ್ನು ನಾಡಿನ ಶಿಕ್ಷಕ ಸಮುದಾಯ ಅರ್ಥಮಾಡಿಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆ ಶಿಕ್ಷಕರಿಗೆ ಲಕ್ಷ ಲಕ್ಷ ಮಾಸಿಕ ವೇತನ ನೀಡುತ್ತಿದೆ. ಆದರೆ, ಮಕ್ಕಳಿಗೆ ಗುಣ ಮಟ್ಟದ ಬೋಧನೆಯನ್ನು ನಿರ್ಲಕ್ಷ್ಯ ಮಾಡುವುದು ಸಮಾಜಕ್ಕೆ ಅಪಾಯಕಾರಿ. ಯಾವುದೇ ಶಿಕ್ಷಕರು ಬೋಧನೆಯಲ್ಲಿ ನಿರ್ಲಕ್ಷ್ಯ ಮಾಡದೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಮೂಲಕ ಸಮಾಜದ ಋಣವನ್ನು ತೀರಿಸಬೇಕು ಎಂದು ಕರೆ ನೀಡಿದರು.ಸಭೆಯಲ್ಲಿ ತಾಪಂ ಯೋಜನಾಧಿಕಾರಿ ಮೋದೂರು ಶ್ರೀನಿವಾಸ್, ಗ್ರಾಮ ಮುಖಂಡ ನಂದೀಶ್, ಮುಖ್ಯ ಶಿಕ್ಷಕ ಪಿ.ಎನ್.ಶಿವಣ್ಣ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಮತ್ತಿತರರಿದ್ದರು.