ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಕೆ.ಪಿ.ಎಸ್.ಶಾಲೆಯ ಆವರಣ ಬಿಆರ್ಸಿ ತರಬೇತಿ ಕೇಂದ್ರದ ಆವರಣದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ ಹಿನ್ನೆಲೆಯಲ್ಲಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಜೊತೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿದರು.
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಖಾಸಗಿ ಶಾಲೆ ಮಗು 625 ಅಂಕಗಳಿಸಿ ರಾಜ್ಯದ ಟಾಪ್ ಸಾಲಿಗೆ ಸೇರಿದ್ದು, ನನಗೆ ಅತೀವ ಸಂತಸ ತಂದಿದೆ. ಅದೇ ರೀತಿ ಹಲವು ಖಾಸಗಿ ಶಾಲೆ ಮಕ್ಕಳು ಉತ್ತಮ ಅಂಕಗಳಿಸಿ ಗಮನ ಸೆಳೆದಿದ್ದಾರೆ ಎಂದರು.ತಾಲೂಕಿನಲ್ಲಿ 23 ಸರ್ಕಾರಿ ಪ್ರೌಢಶಾಲೆಗಳಲ್ಲಿ ಹರಿಹರಪುರ ಸರ್ಕಾರಿ ಪ್ರೌಢಶಾಲೆ ಶೇ.92 ಕ್ಕೂ ಅಧಿಕ ಫಲಿತಾಂಶ ನೀಡಿದೆ. ಆದರೆ, ಉಳಿದೆಲ್ಲಾ ಶಾಲೆಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಇದರಿಂದ ತಾಲೂಕಿನ ಶೇಕಡವಾರು ಫಲಿತಾಂಶ ಕೇವಲ 60.89 ಕ್ಕೆ ಕುಸಿದಿದೆ ಎಂದರು.
ಶಿಕ್ಷಕರು ಹೆಚ್ಚು ಬುದ್ದಿವಂತರು. ಅವರಿಗೆ ಶಾಸಕನಾಗಿ ನಾನು ತಿಳಿವಳಿಕೆ ಹೇಳುವುದು ಸರಿಯಲ್ಲ. ಸರ್ಕಾರ ಅರ್ಹತೆ ಆಧರಿಸಿ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಶಾಲೆಗಳಿಗೆ ನೇಮಕ ಮಾಡುತ್ತಿದೆ. ಶಿಕ್ಷಕ ಸಮುದಾಯಕ್ಕೆ ಕೈತುಂಬಾ ಸಂಬಳ, ಕಾಲಕಾಲಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡುತ್ತಿದೆ. ಆದರೂ ಶಿಕ್ಷಕರು ತಮ್ಮ ತಮ್ಮ ಶಾಲೆಗಳಲ್ಲಿ ಉತ್ತಮ ಫಲಿತಾಂಶ ನೀಡುತ್ತಿಲ್ಲ ಎಂದರೆ ಇದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.
ಫಲಿತಾಂಶ ಕುಸಿತದ ಬಗ್ಗೆ ಶಿಕ್ಷಕ ಸಮುದಾಯ ಸಬೂಬು ಹೇಳುವುದನ್ನು ನಿಲ್ಲಿಸಬೇಕು. ಮಕ್ಕಳ ಫಲಿತಾಂಶದ ಬಗ್ಗೆ ಉದಾಸೀನ ಸಲ್ಲದು. ಶಿಕ್ಷಕ ಸಮುದಾಯ ಸಮಾಜದ ನಂಬಿಕೆ ಕಳೆದುಕೊಳ್ಳಬಾರದು. ಶಿಕ್ಷಕರು ತಮ್ಮ ಆತ್ಮಸಾಕ್ಷಿಗೆ ದ್ರೋಹ ಮಾಡಿಕೊಳ್ಳಬಾರದು ಎಂದರು.