ಭೂ ಮಾಪಕರಿಗೆ ಸರ್ಕಾರ ಭದ್ರತೆ ನೀಡಲಿ

KannadaprabhaNewsNetwork |  
Published : Apr 30, 2025, 12:33 AM IST
ಪಟ್ಟಣದ ಜಿಕೆ ಬಿಎಮ್ಎಸ್ ಮೈದಾನದಲ್ಲಿ ಪರವಾನಿಗೆ ಪಡೆದ ಭೂಪ ಭೂಮಾಪನ ಅಧಿಕಾರಿಗಳು ಏರ್ಪಡಿಸಿದ್ದ ಕ್ರೀಡಾಕೂಟ ಉದ್ಘಾಟನೆ ಸಂದರ್ಭ | Kannada Prabha

ಸಾರಾಂಶ

ಸದಾ ವಿವಾದಗಳು ಸಮಸ್ಯೆಗಳ ಜೊತೆ ಕಾರ್ಯನಿರ್ವಹಿಸುವ ಭೂಮಾಪನ ಅಧಿಕಾರಿಗಳಿಗೆ ಸರ್ಕಾರ ಭದ್ರತೆ ನೀಡಬೇಕು

ಕನ್ನಡಪ್ರಭ ವಾರ್ತೆ ಕುಣಿಗಲ್

ಸದಾ ವಿವಾದಗಳು ಸಮಸ್ಯೆಗಳ ಜೊತೆ ಕಾರ್ಯನಿರ್ವಹಿಸುವ ಭೂಮಾಪನ ಅಧಿಕಾರಿಗಳಿಗೆ ಸರ್ಕಾರ ಭದ್ರತೆ ನೀಡುವುದರ ಜೊತೆಗೆ ಅವರ ಜೀವಕ್ಕೆಆಸರೆ ಆಗಬೇಕು. ನಾನು ವೈಯಕ್ತಿಕವಾಗಿ ಒಂದು ಲಕ್ಷ ನೀಡುತ್ತೇನೆ ಎಂದು ಧನಂಜಯ ಗುರೂಜಿ ಘೋಷಿಸಿದರು. ಕುಣಿಗಲ್ ಪಟ್ಟಣದ ಜಿಕೆ ಬಿಎಮ್ಎಸ್ ಮೈದಾನದಲ್ಲಿ ಏರ್ಪಡಿಸಿದ್ದ ವಿಶ್ವ ಭೂಮಾಪನ ದಿನಾಚರಣೆ ಅಂಗವಾಗಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು ಇತ್ತೀಚಿಗೆ ಭೂಮಾಪನ ಅಧಿಕಾರಿಗಳ ಮೇಲೆ ಹಲ್ಲೆ, ದಾಳಿಗಳು ನಿರಂತರವಾಗಿ ನಡೆಯುತ್ತಿದೆ ದೊಡ್ಡಬಳ್ಳಾಪುರದಲ್ಲಿ ಬಂದೂಕಿಂದ ಗುಂಡು ಹಾರಿಸಿದ ಘಟನೆಯನ್ನು ನೆನಪಿಸಿಕೊಂಡ ಸ್ವಾಮೀಜಿ ಮುಂದಿನ ದಿನಗಳಲ್ಲಿ ಭೂಮಾಪನ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಅವರ ಕುಟುಂಬಕ್ಕೆ ಪರಿಹಾರ ನೀಡುವುದರ ಜೊತೆಗೆ ಅವರ ಜೀವಕ್ಕೆ ಭದ್ರತೆ ನೀಡಲು ಸರ್ಕಾರ ಮುಂದಾಗಬೇಕೆಂದರು.

ಜಿಲ್ಲಾ ಮಾಪನಾಧಿಕಾರಿ ನಿರಂಜನ್ ಮಾತನಾಡಿ ಮಾಪನ ಅಧಿಕಾರಿಗಳು ದಿನನಿತ್ಯ ಹಲವಾರು ಒತ್ತಡಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತಮ ಪಡಿಸಬೇಕೆಂದು ಈ ರೀತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವುದು ಅಭಿನಂದನ ವಿಚಾರ ಆದರೆ ಈ ದಿನದ ಕಾರ್ಯಕ್ರಮಗಳನ್ನು ನಾಳೆ ಪೂರೈಸುವ ಕೆಲಸ ಆಗಬೇಕಿದೆ ಎಂದರು. ಉತ್ತಮ ಅಭಿವೃದ್ಧಿ ಮತ್ತು ಕಾರ್ಯಕ್ಕಾಗಿ ಇಲಾಖೆ ವತಿಯಿಂದ ಎಲ್ಲಾ ರೀತಿ ಸಹಕಾರ ನೀಡುವುದಾಗಿ ತಿಳಿಸಿದರು.

ಪರವಾನಿಗೆ ಪಡೆದ ಭೂಮಾಪನ ಅಧಿಕಾರಿಗಳ ಜಿಲ್ಲಾಧ್ಯಕ್ಷ ನಾಗೇಶ್ ಮಾತನಾಡಿ ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ನಿರಂತರವಾಗಿ ಸಂಪರ್ಕ ಸಾಧಿಸುತ್ತಿದ್ದೇವೆ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದರು.

ಕುಣಿಗಲ್ ಸಿಪಿಐ ನವೀನ ಗೌಡ ಮಾತನಾಡಿ ಪೊಲೀಸರ ರೀತಿ ಕಾರ್ಯನಿರ್ವಹಿಸುವಂತಹ ಭೂಮಾಪನ ಅಧಿಕಾರಿಗಳು ಹಲವಾರು ಸಂದರ್ಭದಲ್ಲಿ ತೊಂದರೆಗೆ ಈಡಾಗುವ ಸನ್ನಿವೇಶಗಳು ಎದುರಾಗುತ್ತವೆ ಅದಕ್ಕಾಗಿ ಅವರು ತಕ್ಷಣ ಪೊಲೀಸ್ ಇಲಾಖೆಯ ಸಹಕಾರ ಪಡೆದು ಉತ್ತಮ ರೀತಿ ನ್ಯಾಯ ಬದ್ಧ ಕಾರ್ಯಕ್ರಮ ಹಾಗೂ ಸರ್ವೇ ಮಾಡಬೇಕೆಂದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಜಯರಾಜು ಗ್ರೇಡ್ ಟು ತಹಸೀಲ್ದಾರ್ ಯೋಗೇಶ್ ಸೇರಿದಂತೆ ಹಲವಾರು ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಿಗ ಅಧಿಕಾರಿಗಳು ಜನಾಂಗ ಅಭಿವೃದ್ಧಿ ಚಿಂತಿಸುತ್ತಿಲ್ಲ: ಜಗದೀಶ್
ಸಮೃದ್ಧಿ ಶಿಕ್ಷಣ ಟ್ರಸ್ಟ್ ನಿಂದ ವೃದ್ಧರಿಗೆ ಬೆಡ್ ಶೀಟ್, ಸ್ವೇಟರ್ ವಿತರಣೆ