ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡ: ಸಿ.ಟಿ. ರವಿ

KannadaprabhaNewsNetwork |  
Published : Jun 06, 2025, 12:03 AM IST
ಸಿ.ಟಿ. ರವಿ | Kannada Prabha

ಸಾರಾಂಶ

ಚಿಕ್ಕಮಗಳೂರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ನೂಕು ನುಗ್ಗಲಿನಿಂದ 11 ಜನ ಸಾವನ್ನಪ್ಪಿದ ದುರಂತ ಘಟನೆ ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಜನರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯವಹಿಸಿದೆ: ಆರೋಪ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ನೂಕು ನುಗ್ಗಲಿನಿಂದ 11 ಜನ ಸಾವನ್ನಪ್ಪಿದ ದುರಂತ ಘಟನೆ ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರದ ಪ್ರಚಾರದ ಹಪಾಹಪಿತನದಿಂದ ಸಂಭವಿಸಿದ ಸಾವು. ಜನ ಸೇರಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿತ್ತು. ಸರ್ಕಾರವೇ ಈ ಕಾರ್ಯಕ್ರಮ ಘೋಷಿಸಿತ್ತು. ಆದರೂ ಜನರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯವಹಿಸಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಸರ್ಕಾರಕ್ಕೆ ಜನರ ರಕ್ಷಣೆ ಆದ್ಯತೆಯಾಗಬೇಕಿತ್ತೇ ಹೊರತು ಪ್ರಚಾರದ ತೆವಲು ಅಲ್ಲ. ಈ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಮಹಿಳೆಯೊಬ್ಬಳು ಮೃತಪಟ್ಟಿದ್ದಕ್ಕೆ ತೆಲುಗು ನಟ ಅಲ್ಲು ಅರ್ಜುನ್ ಎ1 ಮಾಡಿ ಜೈಲಿಗೆ ಹಾಕಿದ್ದರು. ಈಗ ನೀವೇ ಜೈಲಿಗೆ ಹೋಗಬೇಕು. ಮಾನ ಮಾರ್ಯಾದೆ ಇದ್ದರೆ ರಾಜೀನಾಮೆ ಕೊಡಿ. ಬೇರೆಯವರ ಪ್ರಕರಣಗಳಾದಾಗ ಸಂವಿಧಾನ ಕಾನೂನು ಎನ್ನುವ ನೀವು ನಿಮ್ಮದೇ ಪ್ರಯೋಜಿತಾ ಸಾವುಗಳಾದಾಗ ಅದು ನಮ್ಮದಲ್ಲ ಅಂತ ಕಾಗಕ್ಕ-ಗೂಬಕ್ಕನ ಕಥೆ ಹೇಳೋಕೆ ಶುರು ಮಾಡುತ್ತೀರಿ ಎಂದು ಹರಿಹಾಯ್ದರು.ನ್ಯಾಯಾಂಗ ತನಿಖೆಯಾಗಲಿ:

ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ. ರವಿ ಮ್ಯಾಜಿಸ್ಟ್ರೇಟ್ ತನಿಖೆಯನ್ನು ವಿರೋಧಿಸಿದ್ದು, ಈ ಪ್ರಕರಣದ ತನಿಖೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯ ಬಯಲಿಗೆ ಬರುವುದಿಲ್ಲ ಎಂದ ಸಿ.ಟಿ. ರವಿ, ಮೃತರ ಕುಟುಂಬಗಳಿಗೆ ತಕ್ಷಣವೇ ₹25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಶಾಪ ತಟ್ಟುತ್ತದೆ:

ಬೆಂಗಳೂರು ಕಾಲ್ತುಳಿತದಲ್ಲಿ ಮಕ್ಕಳು, ಮೊಮ್ಮಕ್ಕಳನ್ನು ಕಳೆದುಕೊಂಡವರ ಶಾಪ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಟ್ಟುತ್ತದೆ ಎಂದು ಸಿ.ಟಿ.ರವಿ ಹೇಳಿದರು.

ಪ್ರಯಾಗ್ ರಾಜ್ ನಲ್ಲಿ ಪ್ರತಿದಿನ 8-10 ಕೋಟಿ ಜನ ಸೇರಿದರೂ ಯಾವುದೇ ಅವಘಡವಾಗಿಲ್ಲ. ಮುಂಬೈನಲ್ಲಿ ವಿಜಯೋತ್ಸವ ಸಂದರ್ಭದಲ್ಲಿ ಅಲ್ಲಿನ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ಯಾವುದೇ ಅವಘಡ ಸಂಭವಿಸಿರಲಿಲ್ಲ. ಆದರೆ, ಬೆಂಗಳೂರಿನಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದರಿಂದಲೇ ಇಷ್ಟು ದೊಡ್ಡ ಮಟ್ಟದ ಅನಾಹುತ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು‌.ಹಿಂದಿನ ಹೇಳಿಕೆಗೆ ಇಂದೂ ಬದ್ಧ:

ನಾನು ಆರ್‌ಸಿಬಿ ವಿರುದ್ಧ ಮಾತನಾಡಿಲ್ಲ. ಬದಲಿಗೆ ಆರ್‌ಸಿಬಿಯಲ್ಲಿ ಎಷ್ಟು ಮಂದಿ ಕನ್ನಡಿಗರು ಇದ್ದಾರೆ ಎಂದು ಕೇಳಿದ್ದೆನೆ. ನನ್ನ ಹಿಂದಿನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಸಿ.ಟಿ.ರವಿ ತಿಳಿಸಿದರು.

ಆಟಗಾರರ ಹರಾಜು ಕೂಗಿದ್ದಾರೆ. ಅವರೆಲ್ಲರೂ ಪೇಯ್ಡ್ ಪ್ಲೇಯರ್ಸ್. ನಾನು ಕ್ರಿಕೆಟ್ ಪ್ರೇಮಿಯಾಗಿ ಸಿಕ್ಸ್ ಹೊಡೆದಾಗ, ವಿಕೆಟ್ ತೆಗೆದಾಗ ಅವರ ಕೌಶಲ್ಯಕ್ಕೆ ಚಪ್ಪಾಳೆ ಹೊಡೆದಿದ್ದೇನೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌