ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂಧರಿಗೆ ಕಾಂಗ್ರೆಸ್ ಬೆಂಬಲ ಕೊಟ್ಟು ರಾಜಕಾರಣ ಮಾಡುತ್ತಿರುವುದರಿಂದಲೇ ಅವರು ಕೊಬ್ಬಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಮತಾಂಧರು ಬಾಲ ಬಿಚ್ಚುತ್ತಾರೆ. ಅವರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ಇಂಥ ಮತಾಂಧರ ಹೆಡೆಮುರಿ ಕಟ್ಟದಿದ್ದರೆ ಕರ್ನಾಟಕ ನಾಡಗೀತೆಯ ಆಶಯದಂತೆ ಇರುವುದಿಲ್ಲ ಎಂದು ಕಿಡಿಕಾರಿದರು.ಪ್ಯಾಲೆಸ್ತೆನ್ ದ್ವಜ ಹಾರಿಸಿದರೆ ತಪ್ಪೇನು ಎಂದು ಸಚಿವ ಜಮೀರ್ ಅಹಮದ್ ಕೇಳಿದ್ದಾರೆ. ಇಲ್ಲಿರುವವರೆಗೂ ಪ್ಯಾಲೇಸ್ತೇನ್ ಗೂ ಏನು ಸಂಬಂಧ. ಅವರ ಧ್ವಜವನ್ನು ಏಕೆ ಹಾರಿಸಬೇಕು ಎಂಬುದನ್ನು ಸ್ಪಷ್ಟಪಡಿಸಬೇಕು. ನಿಮಗೆ ಭಾರತದ ಧ್ವಜ ಹಾರಿಸಬೇಕಾದರೆ ಕಷ್ಟವಾಗುತ್ತದೆ. ವಂದೇ ಮಾತರಂ ಹೇಳಲು ಷರಿಯಾ ಅಡ್ಡಿಯಾಗುತ್ತದೆ. ಪ್ಯಾಲೆಸ್ತೇನ್ ಬೆಂಬಲಿಸಿ ಮಾತನಾಡುವುದನ್ನು ನೋಡಿದರೆ ನಿಮ್ಮ ಬಗ್ಗೆಯೂ ಅನುಮಾನ ಮೂಡುತ್ತಿದೆ ಎಂದು ತಿಳಿಸಿದರು.
ರಾಜ್ಯದ ಹಲವೆಡೆ ಗಣಪತಿ ಮೆರವಣಿಗೆ ವೇಳೆ ಗಲಭೆ ನಡೆದ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಪ್ತಚರ ಇಲಾಖೆಗೆ ಎಲ್ಲವೂ ಮಾಹಿತಿ ಇರುತ್ತದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ತಾಲಿಬಾನ್ ಸರ್ಕಾರವಿದ್ದರೂ ಬಾಂಧವರಿಗೆ ಇಷ್ಟೊಂದು ಸ್ವೇಚ್ಛಾಚಾರ ಇರುತ್ತಿರಲಿಲ್ಲ. ಇವರಿಗೆ ಕಾಂಗ್ರೆಸ್ ಸರ್ಕಾರವೇ ತಾಲಿಬಾನ್ ಸರ್ಕಾರ ಎನಿಸಿರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.