ಹುಬ್ಬಳ್ಳಿ:
ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಯುವಕನ ತಂದೆ-ತಾಯಿ ಸೇರಿದಂತೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಇನಾಂವೀರಾಪುರ ಗ್ರಾಮದಲ್ಲಿ ಘಟನೆ ನಡೆದಿರುವ ಬಗ್ಗೆ ಮಾಹಿತಿ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸ್ವಾತಂತ್ರ್ಯ ಸಿಕ್ಕು 79 ವರ್ಷ ಕಳೆದರೂ ಇನ್ನೂ ಅಸಮಾನತೆ ತಾಂಡವವಾಡುತ್ತಿರುವುದು ನೋವಿನ ಸಂಗತಿ. ವಿವೇಕಾನಂದ ದೊಡ್ಡಮನಿ ಅವರ ಕುಟುಂಬದವರು ಬಸವಣ್ಣ ಹಾಗೂ ಅಂಬೇಡ್ಕರ್ ಸಿದ್ಧಾಂತ, ತತ್ವ ನೆಚ್ಚಿ ಜೀವಿಸುತ್ತಿದ್ದಾರೆ. ಆದರೂ ಈ ಕೃತ್ಯ ನಡೆದಿರುವುದು ಮನಸ್ಸಿಗೆ ಖೇದವನ್ನುಂಟು ಮಾಡಿದೆ ಎಂದರು.ಸಮಾಜದಲ್ಲಿ ಇಂಥ ಅಮಾನವೀಯ ಘಟನೆಗಳು ನಡೆಯಬಾರದು. ನಡೆದಿರುವುದು ಬೇಸರದ ಸಂಗತಿ. ಮಗಳ ಜೀವ ತೆಗೆದ ತಂದೆಯ ಕೃತ್ಯ ಖಂಡನೀಯ. ಸಂತ್ರಸ್ತ ಯುವಕ ಹಾಗೂ ಕುಟುಂಬದವರ ಪರವಾಗಿ ಸರ್ಕಾರ, ಜಿಲ್ಲಾಡಳಿತವು ದೃಢವಾಗಿ ನಿಲ್ಲಲಿದೆ. ಘಟನೆ ನೋಡಿದಲ್ಲಿ ಈ ಕುಟುಂಬ ಸಾಮಾಜಿಕ ಬಹಿಷ್ಕಾರಕ್ಕೆ ತುತ್ತಾದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈಗಲೂ ದೊಡ್ಡಮನಿ ಕುಟುಂಬ ತಮ್ಮ ಗ್ರಾಮಕ್ಕೆ ತೆರಳಲು ಭಯಪಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲಿ ಗ್ರಾಮದಲ್ಲಿ ಸೌಹಾರ್ದ ಸಭೆ ನಡೆಸಿ ಕುಟುಂಬದವರಿಗೆ ಹಾಗೂ ಗ್ರಾಮಸ್ಥರಿಗೆ ಧೈರ್ಯ ತುಂಬಲಾಗುವುದು ಎಂದು ಲಾಡ್ ಹೇಳಿದರು.ಕರ್ತವ್ಯ ಲೋಪ; ಕ್ರಮ
ಇದೇ ವೇಳೆ ಗಾಯಾಳು ಕುಟುಂಬಕ್ಕೆ ಸಚಿವ ಸಂತೋಷ ಲಾಡ್ ಅವರು ವೈಯಕ್ತಿಕವಾಗಿ ₹2.50 ಲಕ್ಷ ಸಹಾಯಧನ ನೀಡಿದರು.
ಕೆಲ ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ. ಹಾಗಾಗಿ ಗಾಯಾಳುಗಳು ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಆದರೆ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಂಡಿದ್ದೇನೆ. ರಾಜ್ಯ ಸರ್ಕಾರದಿಂದ ಮಾಡಬೇಕಾದ ಎಲ್ಲ ಸಹಾಯ, ಸಹಕಾರ ಮಾಡಲಾಗುತ್ತಿದೆ. ಇಡೀ ಸರ್ಕಾರವೇ ಆ ಕುಟುಂಬದ ಜತೆ ನಿಲ್ಲಲಿದೆ ಎಂದು ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.