ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಹೇಮಗಿರಿಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖಾ ಮಠಕ್ಕೆ ಸೇರಿದ ಬಿಜಿಎಸ್ ಕೇಂದ್ರೀಯ ಶಿಕ್ಷಣ ಶಾಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಜಯಂತಿಗಳಿಂದಾಗಿ ಮಾನವತಾ ವಾದಿಗಳಾದ ಮಹಾನ್ ಪುರುಷರು ಜಾತಿವಾದಿಗಳ ಹಿಡಿತಕ್ಕೆ ಸಿಲುಕಿದ್ದಾರೆ. ಇದೊಂದು ಸಾಮಾಜಿಕ ದುರಂತ. ಮುಂದಿನ ದಿನಗಳಲ್ಲಿ ಸರ್ಕಾರದ ಜಯಂತಿಗಳು ಸಮಾಜಕ್ಕೆ ಮಾರಕವಾಗಲಿವೆ. ಮಹನೀಯರ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸಿ ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕು. ಕಾಯಕ ತತ್ವದ ಅಡಿಯಲ್ಲಿ ಸಮಾಜವನ್ನು ಕಟ್ಟುವ ಕೆಲಸವಾಗಬೇಕು ಎಂದರು.ಒಂದು ಸರ್ಕಾರ ಮಾಡಬೇಕಾದ ಕೆಲಸಗಳನ್ನು ಮಠಗಳು ಮಾಡುತ್ತಿವೆ. ನನಗೆ ಕನ್ನಡ ಬಿಟ್ಟು ಬೇರೆ ಭಾಷೆಗಳು ಬರುವುದಿಲ್ಲ. ಕನ್ನಡದ ತಳಹದಿ ಮೇಲೆ 35 ದೇಶಗಳನ್ನು ಸುತ್ತುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಉಚಿತಗೊಳಿಸಿವೆ. ಆದರೆ, ಇಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡುತ್ತಿವೆ ಸರ್ಕಾರಗಳ ವಿರುದ್ಧ ಕಿಡಿಕಾರಿದರು.
ರಾಜಕಾರಣದಲ್ಲಿಂದು ಮೌಲ್ಯಗಳು ಮೆರಯಾಗುತ್ತಿವೆ. ಪ್ರಶಸ್ತಿಗಳು ಮೌಲ್ಯ ಕಳೆದುಕೊಳ್ಳುತ್ತಿವೆ. ಸಮಾಜದಲ್ಲಿಂದು ಒಳ್ಳೆಯ ರಾಜಕಾರಣಿಗಳ ಅಭಾವವಿದೆ. ನಾಡಪ್ರಭು ಕೆಂಪೇಗೌಡರಂತಹ ಜಾತ್ಯತೀತ ಮನೋಭಾವದ ದೂರದೃಷ್ಟಿಯ ನಾಯಕತ್ವ ಸಮಾಜಕ್ಕೆ ಬೇಕಾಗಿದೆ ಎಂದರು.
ರಾಜ್ಯ ಒಕ್ಕಲಿಗರ ಸಂಘದಿಂದ ಕೆ.ಆರ್.ಪೇಟೆಯಲ್ಲಿ ಒಂದು ನರ್ಸಿಂಗ್ ಕಾಲೇಜು ಹಾಗೂ ವಸತಿ ನಿಲಯ ಆರಂಭಿಸುವಂತೆ ಶಾಸಕರು ಮನವಿ ಮಾಡಿದರು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ನಾಡಪ್ರಭು ಕೆಂಪೇಗೌಡರನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ನೆಲ್ಲಿಗೆರೆ ಬಾಲು, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಇದ್ದರು.