ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಜಿಲ್ಲಾ ಕೃಷಿ ಅಧಿಕಾರಿ(ಜೆಡಿ) ಡಿ.ಡಬ್ಲ್ಯೂ.ರಾಜಶೇಖರ್ ಮಾತನಾಡಿ, ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸರ್ಕಾರದ ಸೌಲಭ್ಯ ಪಡೆಯಲು ಸಂಘಗಳ ಮೂಲಕ ರೈತರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಂದು ರೈತರು ಆಧುನಿಕ ತಂತ್ರಜ್ಞಾನ ಬಳಸಿಕೊಂಡು 1 ಎಕರೆ ಪ್ರದೇಶದಲ್ಲಿ ಬೆಳೆದು ಲಾಭ ಪಡೆಯುತ್ತಿದ್ದಾರೆ. ಹವಾಮಾನ ವೈಪರಿತ್ಯದಿಂದ ರೈತರ ಬೆಳೆಗಳು ಹಾಳಾಗುತ್ತಿದ್ದು, ಬೆಳೆಗಳ ವಿಮೆ ಮಾಡಿ ರೈತರು ವಿಮಾ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೈತರಿಗೆ ಕೃಷಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.ಸಂದರ್ಭದಲ್ಲಿ ರಾಜ್ಯದ ಕಾರ್ಯಧಕ್ಷ ಮಹಾಂತಗೌಡ ಸುಭೇದಾರ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಹಲವಾರು ಜನ ಮುಖಂಡರು ಮಾತನಾಡಿದರು.ಅಭಿನವ ಕಾಶಿಲಿಂಗ ಮಹಾಸ್ವಾಮಿಗಳು ಚೌಕಿಮಠ ಸಾನ್ನಿಧ್ಯ ವಹಿಸಿದ್ದರು. ರೈತ ಚೇತನ ಪ್ರೊ.ನಂಜುಂಡಸ್ವಾಮಿ ಅವರ ಫೋಟೋ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಬಸನಗೌಡ ಲಿಂಗದಳ್ಳಿ (ಚಬನೂರ), ಸಚಿನಗೌಡ ಪಾಟೀಲ ಕುದುರಿಸಾಲವಾಡಗಿ, ಭೀಮನಗೌಡ ಸಿದರಡ್ಡಿ, ಸಂಗಮೇಶ ಛಾಯಗೋಳ, ಅಪ್ಪುಗೌಡ ಪೊಲೀಸಪಾಟೀಲ, ಗೌರವಾಧ್ಯಕ್ಷ ಶಿವಾನಂದ ಹಿರೇಮಠ, ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಸಂಘಟನೆಯ ಪದಾಧಿಕಾರಿಗಳು, ಗ್ರಾಪಂ ಸದಸ್ಯರು ಹಾಗೂ ಸುತ್ತ-ಮುತ್ತಲಿನ ಗ್ರಾಮದ ರೈತರು ಭಾಗವಹಿಸಿದ್ದರು. ರಮೇಶ ಚಾಂದಕವಠೆ ಕಾರ್ಯಕ್ರಮ ನಿರೂಪಿಸಿದರು. ಎಂ.ಡಿ.ವನಹಳ್ಳಿ ಸ್ವಾಗತಿಸಿ, ವಂದಿಸಿದರು.
ನಮ್ಮ ಸಮಸ್ಯೆಗಳನ್ನು ನಾವೇ ಪರಿಹರಿಸಿಕೊಳ್ಳಬೇಕು. ಅದಕ್ಕಾಗಿ ರೈತರೆಲ್ಲಾ ಒಗ್ಗಟ್ಟಾಗಬೇಕು. ಜನಪ್ರತಿನಿಧಿಗಳು ಶ್ರೀಮಂತರಾಗುತ್ತಿದ್ದು ರೈತರು ಬೇಸಾಯದಿಂದ ಸಾಲಬಾಧೆಯಿಂದ ನರಳುತ್ತಿದ್ದಾರೆ. ಕಾನೂನಡಿಯಲ್ಲಿ ನಮಗೆ ಸೇರಬೇಕಾದ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ಆದಕಾರಣ ಸವಲತ್ತುಗಳನ್ನು ಪಡೆಯಲು ರೈತ ಸಂಘಕ್ಕೆ ಸೇರಬೇಕು.
-ಚುನಪ್ಪ ಪೂಜಾರಿ, ರೈತ ಸಂಘದ ರಾಜ್ಯಾಧ್ಯಕ್ಷ.