ನ್ಯಾ.ಸದಾಶಿವ ಆಯೋಗದ ಜಾರಿಗೊಳಿಸಿ: ಕಾರಜೋಳ

KannadaprabhaNewsNetwork |  
Published : Dec 15, 2023, 01:30 AM IST
ಅಅಅ | Kannada Prabha

ಸಾರಾಂಶ

ನ್ಯಾ.ಸದಾಶಿವ ಆಯೋಗದ ಜಾರಿಗೊಳಿಸಿ

ಕನ್ನಡಪ್ರಭ ವಾರ್ತೆ ಬೆಳಗಾವಿ

ಅನ್ಯಾಯಕ್ಕೆ ಒಳಗಾಗಿರುವ ಮಾದಿಗ ಸಮುದಾಯಕ್ಕೆ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು.

ನಗರದ ಕುಮಾರ ಗಂಧರ್ವ ಕಲಾ ಭವನದಲ್ಲಿ ಗುರುವಾರ ಹಮ್ಮಿಕೊಂಡ ಮಾದಿಗ ಮುನ್ನೆಡೆ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಿಗ ಸಮಾಜವು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ‌. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ಮಾದಿಗ ಸಮಾಜ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಬಹಳ ಹಿಂದುಳಿದಿದೆ. ನ್ಯಾ. ಸದಾಶಿವ ಆಯೋಗ ವರದಿ ಮಂಡಿಸಿ ನ್ಯಾಯ‌ ಒದಗಿಸಬೇಕಿದೆ. ಜನರನ್ನು ಮೇಲೆತ್ತುವ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮಡು, ಭಾರತಿ ಮರುಳು, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಉಮೇಶ ಕಾರಜೋಳ, ಮುತ್ತಣ್ಣ ಬೆನ್ನೂರ, ಬಾಳಪ್ಪ ಬೂದಿಹಾಳ, ಚಂದ್ರಕಾಂತ ಕಾಂತಿಕಾರ, ಸುಧಾಕರ ಸೂರ್ಯವಂಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ