ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತರೀಕೆರೆ ತಾಲೂಕು ಘಟಕದಿಂದ ಮನವಿ
ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತರೀಕೆರೆ ತಾಲೂಕು ಘಟಕದಿಂದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಗಳಾದ 7ನೇ ವೇತನ ಆಯೋಗದ ವರದಿ ಯಥಾವತ್ತು ಜಾರಿ, ಎನ್ಪಿಎಸ್ ನೌಕರರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವುದು ಹಾಗೂ ಈಗಾಗಲೇ ಘೋಷಣೆಯಾಗಿರುವ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸಂಬಂಧ ಮುಖ್ಯಮಂತ್ರಿಯವರ ಜೊತೆ ಚರ್ಚಿಸಲು ಶಾಸಕರಿಗೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.ಈ ಸಂಬಂಧ ದಿನವೇ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವ ಜೊತೆಗೆ ಮಾತನಾಡುವುದಾಗಿ ಭರವಸೆ ನೀಡಿದರು.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್ . ನಾಗರಾಜಪ್ಪ ಮಾತನಾಡಿ ನೌಕರರ ಹಿತ ದೃಷ್ಟಿಯಿಂದ ಮೂರು ಪ್ರಮುಖ ಬೇಡಿಕೆಗಳನ್ನು ಶೀಘ್ರವೇ ಜಾರಿಗೆ ತರುವಂತೆ ಮನವಿ ಮಾಡಿದರು.
ಹಾಜರಿದ್ದರು.11ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕ ತರೀಕೆರೆಯಿಂದ ಶಾಸಕ ಜಿ.ಎಚ್. ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.