ಕಾವೇರಿಗೆ ನದಿಗೆ ಹಾರಿದ ಸರ್ಕಾರಿ ನೌಕರ ನಾಪತ್ತೆ

KannadaprabhaNewsNetwork |  
Published : Jul 25, 2024, 01:29 AM IST
ನೀರಿಗೆ ಹಾರಿದ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಸಂದರ್ಭ | Kannada Prabha

ಸಾರಾಂಶ

ಸರ್ಕಾರಿ ನೌಕರ ಕುಶಾಲನಗರ ಕೊಪ್ಪ ಕಾವೇರಿ ಸೇತುವೆಯ ಮೇಲಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿ ನಾಪತ್ತೆಯಾದ ಘಟನೆ ನಡೆದಿದೆ. ಮಡಿಕೇರಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅರುಣ್ (50) ನದಿಯ ಸೇತುವೆ ಭಾಗದಿಂದ ಹಾರಿರುವುದಾಗಿ ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಸರ್ಕಾರಿ ನೌಕರ ಕುಶಾಲನಗರ ಕೊಪ್ಪ ಕಾವೇರಿ ಸೇತುವೆಯ ಮೇಲಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿ ನಾಪತ್ತೆಯಾದ ಘಟನೆ ನಡೆದಿದೆ. ಮಡಿಕೇರಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅರುಣ್ (50) ನದಿಯ ಸೇತುವೆ ಭಾಗದಿಂದ ಹಾರಿರುವುದಾಗಿ ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ಬೆನ್ನಲ್ಲೇ ಕುಶಾಲನಗರ ಪಟ್ಟಣ ಪೊಲೀಸರು ಅಗ್ನಿಶಾಮಕ ಮತ್ತು ತುರ್ತು ಸೇವೆ ವಿಭಾಗದ ಸಿಬ್ಬಂದಿ, ಎನ್‌ಡಿಆರ್‌ಎಫ್‌ ತಂಡದ ಸದಸ್ಯರು ಹಾರಿರುವ ವ್ಯಕ್ತಿಯ ಪತ್ತೆಗಾಗಿ ನದಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಮಧ್ಯಾಹ್ನ ಸುಮಾರು 4 ಗಂಟೆಗೆ ಘಟನೆ ನಡೆದಿದ್ದು ಸಂಜೆ ತನಕ ಪತ್ತೆ ಕಾರ್ಯ ನಡೆದಿದ್ದು ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಅರುಣ್ ಕುಶಾಲನಗರದ ಹೌಸಿಂಗ್ ಬೋರ್ಡ್ ಎರಡನೇ ಹಂತದಲ್ಲಿರುವ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದು ಕಚೇರಿಗೆ ತೆರಳುವುದಾಗಿ ಬೆಳಗ್ಗೆ 9 ಗಂಟೆಗೆ ಮನೆ ಬಿಟ್ಟಿದ್ದು, ಕಚೇರಿಯಲ್ಲಿ ಗೈರು ಹಾಜರಿ ಬಗ್ಗೆ ಮಾಹಿತಿ ಲಭಿಸಿದೆ.

ಅರುಣ್ ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ಪಾನ ಮತ್ತನಾಗಿ ಕುಳಿತಿದ್ದ ದೃಶ್ಯವನ್ನು ಅಲ್ಲಿನ ಸಿಬ್ಬಂದಿ ಕಂಡಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಜೆ ವೇಳೆಗೆ ಏಕಾಏಕಿ ನದಿಯ ಸೇತುವೆ ಮೇಲೆ ಸಾಗಿ ನೀರಿಗೆ ಹಾರಿರುವುದಾಗಿ ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ತಪಾಸಣಾ ಕೇಂದ್ರದ ಸಿಸಿ ಕ್ಯಾಮರಾದಲ್ಲಿ ಕೂಡ ದೃಶ್ಯಾವಳಿಗಳು ಸೆರೆಯಾಗಿದ್ದು ವ್ಯಕ್ತಿಯೊಬ್ಬ ನದಿಗೆ ಹಾರಿರುವುದು ಖಚಿತಗೊಂಡಿದೆ.

ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಅರುಣ್ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಕುಶಾಲನಗರ ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

ಸ್ಥಳಕ್ಕೆ ಕುಶಾಲನಗರ ಡಿವೈಎಸ್ಪಿ ಆರ್‌.ವಿ. ಗಂಗಾಧರಪ್ಪ, ತಹಸೀಲ್ದಾರ್‌ ಕಿರಣ್ ಗೌರಯ್ಯ ಮತ್ತಿತರರ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

..............

ನೀರಿಗೆ ಹಾರಿದ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಸಂದರ್ಭ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಮಕೂರು ಜಿಲ್ಲೆಯಾದ್ಯಂತ ದಟ್ಟ ಮಂಜು
ಸಂವಿಧಾನ ಅಳಿವು ಉಳಿವು ಸಂರಕ್ಷಣೆ ಕುರಿತು ಚಿಂತನ-ಮಂಥನ ಕಾರ್ಯಾಗಾರ