ಚಳ್ಳಕೆರಯಲ್ಲಿ ಕರ್ನಾಟಕ ರಾಷ್ಟ್ರಸಮಿತಿ ಪಕ್ಷ ಆಗ್ರಹಕನ್ನಡಪ್ರಭ ವಾರ್ತೆ ಚಳ್ಳಕೆರೆ:
ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ನಗರಂಗೆರೆ ಸಿ.ಮಹೇಶ್ ಈ ಕುರಿತು ಮಾತನಾಡಿ, ಸರ್ಕಾರಿ ಸೇವೆಯಲ್ಲಿ ನಿರತರಾದವರು ಸಾರ್ವಜನಿಕರ ಹಿತದೃಷ್ಠಿಯಿಂದ ತಮ್ಮ ಆಸ್ತಿಗಳನ್ನು ಘೋಷಿಸಿಕೊಳ್ಳಬೇಕೆಂಬುವುದು ನಿಯಮವಿದೆ. ಆದರೆ, ಬಹುತೇಕ ಸರ್ಕಾರಿ ನೌಕರರು ಇದನ್ನು ನಿರ್ಲಕ್ಷಿಸುತ್ತಾ ಬಂದಿದ್ದಾರೆ. ಆದ್ದರಿಂದ ಸರ್ಕಾರಿ ನೌಕರರು ಈ ಕೂಡಲೇ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಳ್ಳುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಕೆ.ಟಿ.ನಾಗರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಣಿಮಠ, ಜಿಲ್ಲಾ ಯುವಘಟಕದ ಕಾರ್ಯದರ್ಶಿ ಜಬೀವುಲ್ಲಾ, ತಾಲ್ಲೂಕು ಕಾರ್ಯದರ್ಶಿ ಪಾಪಯ್ಯ ಮುಂತಾದವರು ಇದ್ದರು.