ಬೇಸಿಗೆಯಲ್ಲಿ ಕುಡಿವ ನೀರು ಕೊಡದ ಸರ್ಕಾರ

KannadaprabhaNewsNetwork |  
Published : Apr 21, 2024, 02:24 AM IST
ಅರವಿಂದ ಲಿಂಬಾವಳಿ | Kannada Prabha

ಸಾರಾಂಶ

ಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ.

ಕನ್ನಡಪ್ರಭ ವಾರ್ತೆ ತುಮಕೂರುಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ. ಬರಗಾಲದಲ್ಲಿ ಜನರಿಗೆ ಒಂದು ಚೊಂಬು ಕುಡಿಯುವ ನೀರು ನೀಡುವ ಯೋಗ್ಯತೆ ಇವರಿಗಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಲಜೀವನ್ ಮಿಷನ್‌ನಲ್ಲಿ ಹಳ್ಳಿಹಳ್ಳಿಗಳ ಮನೆಮನೆಗಳಿಗೆ ಕುಡಿಯುವ ನೀರು ನೀಡುತ್ತಿದೆ. ಕಾಂಗ್ರೆಸ್ ಕಾರ್ಯಕ್ರಮಗಳಿಗೂ ಮೋದಿ ಸರ್ಕಾರದ ಕಾರ್ಯಕ್ರಮಗಳಿಗೂ ಇರುವ ವ್ಯತ್ಯಾಸವಿದು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಶನಿವಾರ ನಗರದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಕಲ್ಲು ಒಡೆಯುವ ಮೂಲಕ ಉದ್ಘಾಟಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಅನ್ನಭಾಗ್ಯ ಯೋಜನೆ ನೀಡಿ ರಾಜ್ಯದ ಜನರನ್ನು ಹಸಿವು ಮುಕ್ತಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಾರೆ. ಇವರು ಒಂದು ಕೆಜಿಯಷ್ಟೂ ಅಕ್ಕಿ ಕೊಡುತ್ತಿಲ್ಲ, ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಮೋದಿ ಸರ್ಕಾರದ ಕೊಡುಗೆ. ಅಕ್ಕಿ ಮೋದಿಯವರದ್ದು, ಚೀಲ ಸಿದ್ದರಾಮಯ್ಯ ಅವರದ್ದು ಎಂದರು.ಹೆಣ್ಣುಮಕ್ಕಳ ಸುರಕ್ಷತೆ, ಮಹಿಳಾ ಸಬಲೀಕರಣ, ಅಭಿವೃದ್ಧಿಯಲ್ಲೂ ಮೋದಿ ಸರ್ಕಾರ ಮುಂದಿದೆ. ದೇಶದ ಆರ್ಥಿಕ ಸ್ಥಿತಿ ಹೆಚ್ಚು ಮಾಡಲು, ನಾಗರಿಕ ಸೌಕ ರ್ಯಗಳನ್ನು ಹೆಚ್ಚಿಸಲು ಮೋದಿಯವರು ಶ್ರಮವಹಿಸಿದ್ದಾರೆ. ಜಗತ್ತಿನ ಬಲಿಷ್ಠ ರಾಷ್ಟಗಳೆದುರು ಭಾರತ ಹೆಮ್ಮೆ ಪಡುವ ರೀತಿಯಲ್ಲಿ ದೇಶವನ್ನು ಮುನ್ನಡೆಸು ತ್ತಿದ್ದಾರೆ. ದೇಶ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಮೋದಿಯವರು ಮತ್ತೆ ಪ್ರಧಾನಿಯಾಗಲು ಚುನಾವಣೆಯಲ್ಲಿ ವಿ.ಸೋಮಣ್ಣ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಅರವಿಂದ ಲಿಂಬಾವಳಿ ಮನವಿ ಮಾಡಿದರು.ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಮಾತನಾಡಿ, ಪ್ರಧಾನಿ ಮೋದಿಯವರು ಭಾರತಕ್ಕೆ ಘನತೆ, ಗೌರವ ತಂದುಕೊಟ್ಟಿದ್ದಾರೆ. ಓಬಿಸಿ, ಎಸ್ಸಿ, ಎಸ್ಟಿ ಸಮುದಾಯ ಗಳಿಗೆ ಶಕ್ತಿ ತುಂಬಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ದೇಶಕ್ಕೆ ಮೋದಿಯವರು ಅನಿವಾರ್ಯ ಅವರನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿಯ ಬರ್ಬರ ಹತ್ಯೆ ಅಮಾನವೀಯ. ಹಿಂದುಗಳಿಗೆ ಈ ರಾಷ್ಟ್ರ ಬಿಟ್ಟರೆ ಬೇರೆ ಜಾಗ ಇಲ್ಲ. ದೇಶದ ಜನರ ರಕ್ಷಣೆಗೆ, ಗೌರವವಾಗಿ ಬಳಲು ಮೋದಿಯವರು ಇರಲೇಬೇಕು. ಮೋದಿಯವರನ್ನು ಉಳಿಸಿಕೊಳ್ಳಲು ತುಮಕೂರಿನಲ್ಲಿ ವಿ.ಸೋಮಣ್ಣ ಅವರನ್ನು ಗೆಲ್ಲಿಸಬೇಕು. ಸೋಮಣ್ಣನವರು ಪಾದರಸದಂತೆ ಸದಾ ಕ್ರಿಯಾಶೀಲರಾಗಿರುತ್ತಾರೆ, ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದರು.ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯದರ್ಶಿ ಓಂಕಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಜನಸಾಮಾನ್ಯರ ವಿಚಾರವಿರಲಿ ಜನನಾಯಕರಿಗೂ ರಕ್ಷಣೆಯಿಲ್ಲ. 2020ಲ್ಲಿ ನಮ್ಮ ಭೋವಿ ಸಮಾಜದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಅಲ್ಪಸಂಖ್ಯಾತ ದುಷ್ಕರ್ಮಿಗಳು ನುಗ್ಗಿ ಬೆಂಕಿ ಹಚ್ಚಿದರು. ತಮ್ಮದೇ ಪಕ್ಷದ ಶಾಸಕರನ್ನು ಕಾಂಗ್ರೆಸ್ ಸರ್ಕಾರ ರಕ್ಷಣೆ ಮಾಡಲಿಲ್ಲ, ಆರೋಪಿಗಳ ಪರವಾಗಿ ಪಕ್ಷದ ಅಧ್ಯಕ್ಷರು ಮಾತನಾಡಿದರು. ಇಂತಹ ಕಾಂಗ್ರೆಸ್ ಪಕ್ಷಕ್ಕೆ ಭೋವಿ ಸಮಾಜದವರು ಒಂದು ವೋಟನ್ನೂ ಹಾಕಬಾರದು ಎಂದರು.ನಿವೃತ್ತ ಸರ್ಕಲ್ ಇನ್ಸ್ಪೆಕ್ಟರ್ ಮುನಿರಾಜು, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಗಂಗಮ್ಮ ಆನಂದಕುಮಾರ್, ಧನಲಕ್ಷ್ಮಿ ನಟರಾಜು, ಮುಖಂಡರಾದ ಶಿವಕುಮಾರ್, ಆಶಾ ತ್ರಿಲೋಚನ್, ಮಂಜುನಾಥ್, ವಿಶ್ವನಾಥ್, ಜಯಚಂದ್ರಪ್ಪ, ಪುರುಷೋತ್ತಮ್, ಮುನೇಶ್, ಕೃಷ್ಣಮೂರ್ತಿ, ರಂಗಸ್ವಾಮಿ, ಚಂದ್ರಣ್ಣ, ವೆಂಕಟೇಶ್ ಮೊದಲಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ