ಕನ್ನಡಪ್ರಭ ವಾರ್ತೆ ಹೊಸನಗರ
ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹೊಸನಗರ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜಿಗೆ ದೊಡ್ಡ ತೊಡಕಾಗಿದೆ ನೂರಾರು ಕಂಬಗಳು ಧರೆಗುರುಳಿವೆ. ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಹಾಗೂ ಸಿಬ್ಬಂದಿಗಳ ಕೊರತೆಯಿಂದ ಮರಗಳ ತೆರವು ವಿಳಂಬವಾಗುತ್ತಿದೆ. ಅದರಲ್ಲೂ ಮಲೆನಾಡಿಗೆ ಮಾರಕವಾದ ಅಕೇಶಿಯದ ತೆರವು ಕೂಡಲೇ ಕೈಗೊಳ್ಳದಿದ್ದರೆ ಕ್ಷೇತ್ರದ ಜನತೆಯೊಂದಿಗೆ ಜೊತೆಗೂಡಿ ನಾನೇ ತೆರವುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು
ವಿಧಾನ ಪರಿಷತ್ನ ಮುಖ್ಯ ಸಚೇತಕ ಎನ್. ರವಿಕುಮಾರ್ ಮಾತನಾಡಿ, ಮಲೆನಾಡಿನ ರೈತಾಷಿ ವರ್ಗ ಈ ಮಳೆಗಾಲದಲ್ಲಿ ಅತೀವ ಸಂಕಷ್ಟಕ್ಕೆ ಗುರಿಯಾಗಿದೆ. ರಾಜ್ಯ ಸರ್ಕಾರ ನೀಡುವ ಪರಿಹಾರಕ್ಕೆ ಯಾವುದೇ ಮಾನದಂಡವಿಲ್ಲ. ಯಡಿಯೂರಪ್ಪನವರ ಕಾಲದಲ್ಲಿ ನೀಡಿದ ಪರಿಹಾರದ ಅಂಶಗಳನ್ನು ಗಮನಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.ನೆರೆ, ಪ್ರವಾಹ ಪೀಡಿತ ಪ್ರದೇಶಕ್ಕೆ ಆರು ತಂಡಗಳು ಭೇಟಿ ಕೊಟ್ಟು, ಜಿಲ್ಲಾ ಮುಖ್ಯಸ್ಥರಿಗೆ ತಿಳಿಸಲು ಸೂಚಿಸಿದ್ದಾರೆ. ತೊಂದರೆಗೆ ಪರಿಹಾರ ಕೊಡಲು ನಾವು ಪ್ರೇರೇಪಣೆ ಕೊಡಬೇಕು ಮತ್ತು ಸಹಕಾರಿ ಆಗಬೇಕೆಂಬ ಉದ್ದೇಶದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನಮ್ಮನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಅತಿವೃಷಿ ಅದ್ಯಯನ ತಂಡದ ರಾಜ್ಯ ಬಿಜೆಪಿ ಉಪಾಧ್ಯಕ್ಷ , ಮಾಜಿ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ನಗರದ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾದ್ಯಕ್ಷ ಮೇಘರಾಜ್, ತಾಲೂಕು ಮಂಡಲ ಅಧ್ಯಕ್ಷ ಮತ್ತಿಮನೆ ಸುಬ್ರಮಣ್ಯ, ಶ್ರೀಪತಿರಾವ್ ಹಾಗೂ ಹೊಸನಗರ ಹಾಗೂ ಸಾಗರದ ಕ್ಷೇತ್ರದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಅವಳಿ ಜಲಾಶಯಗಳಿಗೆ ಚೊಚ್ಚಲ ಬಾಗಿನ
ಚಕ್ರಾ, ಸಾವೇಹಕ್ಲು ಜಲಾಶಯಗಳಿಂದ ನಾಡಿನ ಬೆಳಕಿಗೆ ಬಹುದೊಡ್ಡ ಕಾಣಿಕೆ ಬಂದಿದೆ. ಮಾತ್ರವಲ್ಲ ಮಾಲೆನಾಡಿನ ಇಕೋ ಟೂರಿಸಂಗೆ ಈಭಾಗದ ಪ್ರದೇಶ ಪ್ರಶಸ್ತವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.ಅತಿವೃಷ್ಟಿ ಅಧ್ಯಯನ ಪ್ರವಾಸದ ಮಧ್ಯೆ ಚಕ್ರಾ ಹಾಗೂ ಸಾವೇಹಕ್ಲು ಎರಡು ಜಲಾಶಯಗಳಿಗೆ ತೆರಳಿ ಅವರು ಬಾಗಿನ ಸಮರ್ಪಿಸಿದರು. ಎರಡೂ ಜಲಾಶಯ ಪ್ರದೇಶಗಳು ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಜಾಗ. ಪ್ರವಾಸಿಗರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಹಾಗೂ ಈ ಜಲಾಶಯಕ್ಕೆ ಹೋಗಲು ಮಾಸ್ತಿಕಟ್ಟೆಯಿಂದ ಪಾಸ್ ತರಬೇಕಿದೆ. ಸ್ಥಳೀಯವಾಗಿಯೇ ಪಾಸ್ ನೀಡುವ ಸಂಬಂಧ ಕೆಪಿಸಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು.