ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪ್ರೌಢಶಾಲಾ ಸಹ ಶಿಕ್ಷಕರ ಬೇಸಿಗೆ ರಜೆ ಅವಧಿಯಲ್ಲಿಯೂ ಶಿಕ್ಷಕರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಕ್ರಿಯೆ, ಚುನಾವಣಾ ಕರ್ತವ್ಯ, ಚೆಕ್ ಪೋಸ್ಟ್ ನಿರ್ವಹಣೆ, ಮಾಸ್ಟರ್ ಟ್ರೈನ್ರರ್, ಬಿ.ಎಲ್.ಓ ಯೋಜನೆ ಸೇರಿದಂತೆ ಹಲವು ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ ಎಂದರು.
ತಮ್ಮ ವೈಯಕ್ತಿಕ ಕೆಲಸ ಕಾರ್ಯಗಳು ಹಾಗೂ ತಂದೆತಾಯಿ ಮತ್ತು ಪತ್ನಿ, ಮಕ್ಕಳ ಶಸ್ತ್ರಚಿಕಿತ್ಸೆ, ಆರೋಗ್ಯ ತಪಾಸಣೆ ಮುಂತಾದುವುಗಳಿಗೆ ಸಮಯ ಮೀಸಲಿಟ್ಟಿರುತ್ತಾರೆ. ಆದರೆ, ಇಲಾಖೆ ಏಕಾಏಕಿಯಾಗಿ ಶಿಕ್ಷಕರಿಗೆ ಬೇಸಿಗೆ ರಜೆ ಕಡಿತಗೊಳಿಸಿರುವ ಕ್ರಮ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ತಾವು ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಯ ಫಲಿತಾಂಶ ಉತ್ತಮವಾಗಿ ಬರಬೇಕೆಂಬ ಉದ್ದೇಶದಿಂದ ಸಂಘಟಿತವಾಗಿ ಶೈಕ್ಷಣಿಕ ಅವಧಿಯಲ್ಲಿ ಪಾಠಬೋಧನೆ ಜೊತೆಗೆ ವಿಶೇಷ ತರಗತಿಗಳು, ಪರಿಹಾರ ಬೋಧನೆ, ಗುಂಪು ಅಧ್ಯಯನ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಗಮನ ನೀಡುವುದು, ಪಾಸಿಂಗ್ ಪ್ಯಾಕೇಜ್ ಅಭ್ಯಾಸ ಮಾಡಿಸಲಾಗುತ್ತಿದೆ ಎಂದರು.
ಶಿಕ್ಷಕರು ಇಲಾಖಾ ಕಾರ್ಯದ ಹೊರತಾಗಿಯೂ ಸಿಕ್ಕಿರುವ ಮೇ ತಿಂಗಳ ರಜೆ ಅವಧಿಯಲ್ಲಿ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಮಯ ಮೀಸಲಿಡಲು ಯೋಜಿಸಿರುತ್ತಾರೆ. ಆದರೆ, ಇಲಾಖೆ ಅಧಿಕಾರಿಗಳು ದಿಢೀರ್ ಎಂದು ಆದೇಶ ಮಾಡಿದರೆ ವರ್ಷಪೂರ್ತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕ ಸಮೂಹಕ್ಕೆ ಭಾರಿ ಹೊಡೆತ ಕೊಟ್ಟಂತಾಗುತ್ತದೆ.
ಈ ವೇಳೆ ಸಂಘದ ಕಾರ್ಯದರ್ಶಿ ವಿಜಿನಾರಾಯಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎನ್.ಕುಮಾರ್, ರಾಜ್ಯಪರಿಷತ್ ಸದಸ್ಯ ಧನಂಜಯ, ಉಪಾಧ್ಯಕ್ಷ ಸತೀಶ್, ನಾಗೇಶ್, ಎಂ.ಎಸ್.ಸುರೇಶ್ ಸೇರಿದಂತೆ ಹಲವರಿದ್ದರು.