ಕನ್ನಡಪ್ರಭ ವಾರ್ತೆ ಮದ್ದೂರು
ಗ್ರಾಮದಲ್ಲಿ ನಡೆಯುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಸೋಮವಾರ ವೀಕ್ಷಿಸಿ ಕಾಮಗಾರಿ ವಿಳಂಬದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.ಕಟ್ಟಡ ಕಾಮಗಾರಿಗೆ ಜ.31ರಂದು ಭೂಮಿ ಪೂಜೆ ಮಾಡಲಾಗಿತ್ತು. ಜು.31ರಂದು ಕಾಮಗಾರಿ ಮುಗಿಸಿ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿಳಂಬವಾಗುತ್ತಿದೆ ಎಂದರು.
ಶಾಲಾ ಕಟ್ಟಡ ಉದ್ಘಾಟನೆಗೊಂಡ ಎರಡು ತಿಂಗಳೊಳಗೆ ಕಾಂಪೌಂಡ್, ರಸ್ತೆ ಹಾಗೂ ಆಟದ ಮೈದಾನವನ್ನು ನರೇಗಾ ಯೋಜನೆಯಡಿ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ಶಾಸಕ ಕೆ.ಎಂ.ಉದಯ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಸಿಎಂ.ಶಿವಮೂರ್ತಿ, ಇಒ ರಾಮಲಿಂಗಯ್ಯ, ಬಿಇಒ ಕಾಳೀರಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ದಿವ್ಯಾ, ಸಹಾಯಕ ನಿರ್ದೇಶಕ (ನರೇಗಾ) ಮಂಜುನಾಥ್, ಎಸ್.ಡಿ.ಎಂ.ಸಿ ಅಧ್ಯಕ್ಷ ಸಂತೋಷ್, ಗ್ರಾಪಂ ಸದಸ್ಯರಾದ ಶಂಕರ್, ಹನುಮೇಗೌಡ, ಸುಜಾತ ಮುಖಂಡರಾದ ಮಹೇಶ್, ಪುಟ್ಟಪ್ಪ, ಬೋಮ್ಮಯ್ಯ, ತಿಮ್ಮಪ್ಪ, ಸತೀಶ್ ಇತರರು ಇದ್ದರು.