ಸರ್ಕಾರ ವಿಶ್ವಕರ್ಮ ವಿಶ್ವವಿದ್ಯಾಲಯ ತೆರೆಯಬೇಕು: ಧನಿಯಕುಮಾರ್‌ ಒತ್ತಾಯ

KannadaprabhaNewsNetwork |  
Published : Jan 04, 2024, 01:45 AM IST
ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿ | Kannada Prabha

ಸಾರಾಂಶ

ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಾಳಿದಾಸ ಹಾಸ್ಟಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಾಳಿದಾಸ ಹಾಸ್ಟಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು.

ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್, ಜಿಲ್ಲಾ ಜಾತ್ಯಾತೀತ ಮಾನವ ವೇದಿಕೆಯ ಟಿ.ಆರ್.ಅಂಜನಪ್ಪ, ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಜಿ.ಎಂ. ಸಣ್ಣಮುದ್ದಯ್ಯ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಪದಾಧಿಕಾರಿಗಳಾದ ಕೆಂಪರಾಜು, ಹೆಬ್ಬೂರು ಶ್ರೀನಿವಾಸಮೂರ್ತಿ, ಶಾಂತಕುಮಾರ್, ಟಿ.ಎನ್. ಮಧುಕರ್, ಕೆಂಪರಾಜು, ಪಿ. ಮೂರ್ತಿ, ಸಾಹಿತಿ ಡಾ. ಕೃಷ್ಣಮೂರ್ತಿ, ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಹರೀಶ್‌ಆಚಾರ್‌, ರಾಜೇಶ್ ದೊಡ್ಡಮನೆ ಮತ್ತಿತರರು ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅಲ್ಲದೆ ವಿಶ್ವ ಸಮುದಾಯದ ಏಳಿಗೆಗೆ ದುಡಿದ ಹಿರಿಯರಾದ ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ವಿ. ಗಂಗಾಚಾರ್, ಚಿನ್ನಬೆಳ್ಳಿ ಕೆಲಸಗಾರರಾದ ಶಶಿಧರ್, ಟಿ.ಸಿ. ಡಮರುಗೇಶ್ ಅವರುಗಳನ್ನು ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್, ಅಮರಶಿಲ್ಪಿ ಜಕಣಾಚಾರಿ ತುಮಕೂರು ಜಿಲ್ಲೆಯ ಕೈದಾಳ ಗ್ರಾಮದವರೆಂಬುದು ಹೆಮ್ಮೆಯ ವಿಚಾರ. ಅವರ ಕೆತ್ತನೆಯಿಂದ ಮೂಡಿ ಬಂದ ಬೇಲೂರು, ಹಳೇಬೀಡು, ಸೋಮನಾಥಪುರ, ತುಮಕೂರು ಜಿಲ್ಲೆಯ ಅರಳಗುಪ್ಪೆ, ಕೈದಾಳದ ಚನ್ನಕೇಶವ ಸ್ವಾಮಿ ದೇವಾಲಯಗಳು ವಿಶ್ವದ ಪಾರಂಪರಿಕ ಪಟ್ಟಿಗೆ ಸೇರಿವೆ. ಇಂತಹ ಭವ್ಯ ಇತಿಹಾಸವುಳ್ಳ ಸಮುದಾಯದ ಐದು ಕುಲಕಸುಬುಗಳನ್ನು ಅಧ್ಯಯನ ಮಾಡಲು ಸರಕಾರ ವಿಶ್ವಕರ್ಮ ವಿಶ್ವವಿದ್ಯಾಲಯವೊಂದನ್ನ ತೆರೆಯಬೇಕು. ಹಾಗೆಯೇ ಶಾಲಾ ಮಕ್ಕಳಿಗೆ ಜಕಣಾಚಾರಿ ಅವರ ಬಗ್ಗೆ ತಿಳುವಳಿಕೆ ನೀಡಲು ಪಠ್ಯದಲ್ಲಿ ಸೇರ್ಪಡೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ಕೆಲ ಸಮುದಾಯಗಳ ರಾಜ್ಯದ ದಲಿತರು, ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುಕೂಲವಾಗುವ ಕಾಂತರಾಜು ಅವರ ವರದಿಯನ್ನು ಸ್ವೀಕರಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಅಧುನಿಕ ತಂತ್ರಜ್ಞಾನದ ಫಲವಾಗಿ ಕುಲಕಸುಬುಗಳನ್ನು ನಂಬಿ ಬದುಕುತಿದ್ದ ಕಂಬಾರ, ನೇಕಾರ, ಮಡಿವಾಳ, ಸವಿತಾ, ಕುಂಬಾರ, ಮೋಚಿ, ಅಕ್ಕಸಾಲಿಗ, ಶಿಲ್ಪಿಗಳಿಗೆ ಕೆಲಸವಿದಲ್ಲದಂತಾಗಿ, ನೆಲ ಕಚ್ಚಿವೆ. ೧೮೫ ಕೋಟಿ ರು. ಖರ್ಚು ಮಾಡಿ ಅತ್ಯಂತ ವ್ಯವಸ್ಥಿತವಾಗಿ ೪೪ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಮಾಡಿರುವ ಕಾಂತರಾಜು ವರದಿಯನ್ನು ಸರಕಾರ ಸ್ವೀಕರಿಸಬೇಕೆಂಬುದು ಹಿಂದುಳಿದ ವರ್ಗಗಳ ಒಕ್ಕೂಟದ ಆಗ್ರಹವಾಗಿದೆ. ಅಲ್ಲದೆ ಹಿಂದುಳಿದ ವರ್ಗಗಳ ಮಕ್ಕಳು ಹಾಸ್ಟಲ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇರುವ ಹಾಸ್ಟಲ್‌ಗಳು ಸಹ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಸರಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಧನಿಯಕುಮಾರ್ ಆಗ್ರಹಿಸಿದರು.

ಪತ್ರಕರ್ತ ಟಿ.ಎನ್. ಮಧುಕರ್ ಮಾತನಾಡಿ, ಸರಕಾರ ಜನವರಿ ೦೧ ತಾರೀಖನ್ನು ಅಮರ ಶಿಲ್ಪಿ ಜಕಣಾಚಾರಿಗಳ ದಿನವನ್ನಾಗಿ ಘೋಷಿಸಿ ಆಚರಿಸಿಕೊಂಡು ಬರುತ್ತಿದೆ. ವಿಶ್ವಕರ್ಮರ ಪ್ರೇರಣೆಯಿಂದ ಹಲವಾರು ಕಲಾಕೃತಿಗಳನ್ನು ಜಕಣಾಚಾರಿ ರಚಿಸಿದ್ದು, ನಾಡಿನಾದ್ಯಂತ ನೋಡಲು ಸಿಗುತ್ತವೆ. ಜನವರಿ ೨೨ಕ್ಕೆ ಉದ್ಘಾಟನೆಯಾಗಲಿರುವ ರಾಮಮಂದಿರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬಲರಾಮನ ವಿಗ್ರಹ ಸಹ ಕರ್ನಾಟಕದ ಶಿಲ್ಪಿಗಳೇ ತಯಾರಿಸುರುವುದು ಹೆಮ್ಮೆಯ ವಿಚಾರ. ಇಂತಹ ಶ್ರೀಮಂತ ಪರಮಪರೆ ಇರುವ ಸಮುದಾಯ ಸ್ವಾಭಿಮಾನದಿಂದ ಬದುಕುವಂತಹ ಅವಕಾಶವನ್ನು ಸರಕಾರ ಕಲ್ಪಿಸಬೇಕೆಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಜಾತ್ಯಾತೀತ ಮಾನವ ವೇದಿಕೆಯ ಟಿ.ಆರ್. ಅಂಜನಪ್ಪ ಹಾಗೂ ಬಿ.ವಿ.ಗಂಗಾಚಾರ್ ಅವರುಗಳು ಮಾತನಾಡಿದರು.ಕೋಟ್‌

ಹಿಂದುಳಿದ ವರ್ಗಗಳ ಒಕ್ಕೂಟದಿಂದ ಒಬಿಸಿ ಸಮುದಾಯದ ಹಿರಿಯ ಜಯಂತಿಯನ್ನು ಎಲ್ಲಾ ಸಮುದಾಯಗಳನ್ನು ಒಳಗೊಂಡಂತೆ ಆಚರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ರೀತಿಯ ಒಗ್ಗಟ್ಟು ಮುಂದುವರೆದರೆ ಸಮುದಾಯ ಸರ್ಕಾರದಿಂದ ಏನನ್ನಾದರೂ ನಿರೀಕ್ಷಿಸಲು ಸಾಧ್ಯ. ಬಹುಸಂಖ್ಯಾತರೆಲ್ಲಾ ಪ್ರವರ್ಗ ೨ಎ ಮೀಸಲಾತಿ ಕೇಳುತ್ತಿರುವ ಈ ದಿನಗಳಲ್ಲಿ ಹಿಂದುಳಿದ ವರ್ಗಗಳು ಮತ್ತಷ್ಟು ನಿರ್ಲಕ್ಷಕ್ಕೆ ಒಳಗಾಗುತ್ತಿವೆ. ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ.

ಡಾ.ಕೆ.ವಿ. ಕೃಷ್ಣಮೂರ್ತಿ ಸಾಹಿತಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?