ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ಕಾರಿ ಜಾಗದಲ್ಲಿ 10 ವರ್ಷಕ್ಕೂ ಮೇಲ್ಪಟ್ಟು ಡೇರೆ, ಗುಡಿಸಲು, ಟೆಂಟ್ ಹಾಕಿ ವಾಸಿಸುತ್ತಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಆ ಜಾಗವನ್ನು ಖಾತೆ ಮಾಡಿಸಿಕೊಡಬೇಕು ಎಂದರು.
ಸ್ಮಶಾನಕ್ಕಾಗಿ ಸರ್ಕಾರಿ ಜಾಗವನ್ನು ಕಾಯ್ದಿರಿಸಬೇಕು. ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಅಲೆಮಾರಿ ಸಮುದಾಯ ಭವನಗಳ ನಿರ್ಮಾಣ, ಸಮುದಾಯದ ಮಕ್ಕಳಿಗಾಗಿ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶಾಲಾ ವರ್ಗಾವಣೆ ಪತ್ರದಲ್ಲಿ ಅಂತಹವರ ಹೆಸರಿನ ಜೊತೆಗೆ ಜಾತಿ ಮತ್ತು ಪ್ರವರ್ಗ ನಮೂದಿಸುವ ಜೊತೆಗೆ ಜನಾಂಗದವರಿಗೆ ಹೆಚ್ಚು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.ರಾಜ್ಯಾದ್ಯಂತ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರು ಅನೇಕ ವರ್ಷಗಳಿಂದಲೂ ಸರ್ಕಾರಿ, ಖಾಸಗಿ ಖಾಲಿ ನಿವೇಶನಗಳಲ್ಲಿ ಗುಡಿಸಲು, ಗುಡಾರ ಹಾಕಿಕೊಂಡು ಜೀವನೋಪಾಯಕ್ಕಾಗಿ ಹಳ್ಳಿಗಳ ಕಡೆಗೆ ವ್ಯಾಪಾರಕ್ಕೆ ಹೋಗುತ್ತಾರೆ. ಬಾಂಡೆ, ಸೂಜಿ ದಾರ, ಪಿನ್, ಟೇಪ್, ಬಳೆಯಂತಹ ವಸ್ತುಗಳನ್ನು ಮಾರಾಟ ಮಾಡುವುದು, ಬೀಗ ರಿಪೇರಿ, ಪಶು ಸಾಕಾಣಿಕೆ, ಬಲೆ ಹೆಣೆಯುವುದು, ಮೀನುಗಾರಿಕೆ, ಭಿಕ್ಷಾಟನೆ, ಕಣಿ ಹೇಳುವುದು ಹೀಗೆ ನಾನಾ ಕೆಲಸ ಮಾಡಿ, ಬಾಳುವ ಜನ ಎಂದು ತಿಳಿಸಿದರು.
ಸಂಘದ ಎಸ್.ಆರ್.ಇಂದಿರಾ, ಚೌಡೋಜಿ ರಾವ್ ಲಾಗ್ವೆ, ಮಂಜುನಾಥ ಜೋಗಿ, ವೀರೇಶ ದೊಂಬಿದಾಸ ಇತರರಿದ್ದರು.