ಕನ್ನಡಪ್ರಭ ವಾರ್ತೆ ಚಿಂಚೋಳಿ
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದ ಉತ್ತಮ ಭವಿಷ್ಯಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಮತ್ತೆ ಪ್ರಧಾನಮಂತ್ರಿಯಾಗಬೇಕು. ಈ ನಿಟ್ಟಿನಲ್ಲಿ ಬೀದರ್ ಎಂಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಕೇವಲ ಸಾಂಕೇತಿಕ ಅಭ್ಯರ್ಥಿಯಾಗಿರುತ್ತಾರೆ. ನಮಗೆಲ್ಲರಿಗೂ ಕಮಲದ ಚಿನ್ಹೆಯೇ ಅಭ್ಯರ್ಥಿಯಾಗಿರುತ್ತದೆ. ಕೇಂದ್ರ ಸರ್ಕಾರದ ಸಾಧನೆ ಮೇಲೆ ಮತಯಾಚಿಸಬೇಕೆಂದು ಕಾರ್ಯಕರ್ತರಿಗೆ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಅಧಿಕಾರದಲ್ಲಿ ಎಲ್ಲ ಅಣೆಕಟ್ಟುಗಳು ಜಲಾಶಯಗಳು, ಹಳ್ಳಕೊಳ್ಳ ಭರ್ತಿಯಾಗಿ ತುಂಬಿಹರಿಯುತ್ತಿದ್ದವು. ಆದರೆ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ೨೦೧೩ರಿಂದ ೨೦೧೮ವರೆಗೆ ಉತ್ತಮ ಮಳೆಯಾಗದೇ ಬರಗಾಲ ಆಗಿತ್ತು. ಆದರೆ ಬಿ.ಎಸ್.ವೈ. ಕಾಲಗುಣದಿಂದ ರಾಜ್ಯದಲ್ಲಿ ಬರಗಾಲ ಹೋಗಿ ಪ್ರವಾಹ ಹೆಚ್ಚಾಗಿ ಹೋಗಿತ್ತು. ಇಗಿನ ಸರ್ಕಾರದಲ್ಲಿ ರೈತರಿಗೆ ಕೊಡಲು ಹಣ ಇಲ್ಲ. ಹೊಸ ಬೊರ್ವೆಲ್ ಕೊರೆಯಲು ಹಣ ಇಲ್ಲ. ರಾಜ್ಯದ ಬೊಕ್ಕಸ ಸಂಪೂರ್ಣವಾಗಿ ಬರಿದಾಗಿದೆ. ಕಷ್ಟಕ್ಕೂ ಹಣ ಇಲ್ಲ, ಸುಖಕ್ಕೂ ಹಣ ಇಲ್ಲ. ೬೦ ಸಾವಿರ ಕೋಟಿ ರು. ಎಲ್ಲಿಂದ ಬಂದಿದೆ. ೨ ಸಾವಿರ ರು. ಗ್ಯಾರಂಟಿ ಹಣ ಕೊಡಲು ಆಗುತ್ತಿಲ್ಲ. ವಿದ್ಯುತ್, ಮದ್ಯ, ಆಸ್ತಿ ನೋಂದಣಿಗಳಿಗೆ ಹೆಚ್ಚಿನ ಶುಲ್ಕ ಮಾಡಿರುವುದರಿಂದ ಹಣ ಬರುತ್ತಿದೆ ಎಂದು ಟೀಕಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ದೇಶದ ೧೪೦ ಕೋಟಿ ಜನರೇ ನನ್ನ ಕುಟುಂಬವೆಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಸೋನಿಯಾಗಾಂಧಿ, ರಾಹುಲ್ಗಾಂಧಿ ಇವರು ನಮ್ಮ ಕುಟುಂಬವೇ ನಮ್ಮವರು ಎಂದು ಹೇಳುತ್ತಿದ್ದಾರೆ. ಬಿಜೆಪಿ ತಂಡಕ್ಕೆ ಪ್ರಧಾನಮಂತ್ರಿಗಳೇ ಕ್ಯಾಪ್ಟನ್ ಆಗಿರುತ್ತಾರೆ. ಆದರೆ ಕಾಂಗ್ರೆಸ ತಂಡಕ್ಕೆ ಯಾರೂ ಇನ್ನುವರೆಗೂ ಕ್ಯಾಪ್ಟನ್ ಆಗಿಲ್ಲ. ಬೀದರ್ ಲೋಕಸಭೆ ಚುನಾವಣೆಯಲ್ಲಿ ಬೀದರ್ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರಿಗೆ ಚಿಂಚೋಳಿ ಕ್ಷೇತ್ರದಿಂದ ೩೦ ಸಾವಿರ ಮತಗಳ ಲೀಡ್ ಕೊಡಬೇಕು. ಕಾಂಗ್ರೆಸ್ನಿಂದ ಡಿ.ಕೆ. ಸುರೇಶ ಸೋಲು ಖಚಿತ. ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ ಗೆಲುವು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿರಿ ಎಂದು ಮನವಿ ಮಾಡಿದರು.
ಸಭೆಯಲ್ಲಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ ಹುಮನಾಬಾದ, ಮಾಜಿಶಾಸಕ ಅಮರನಾಥ ಪಾಟೀಲ, ಜಗನ್ನಾಥ ಪಾಟೀಲ, ಸಂತೋಷ ಗಡಂತಿ, ತಾಲೂಕು ಬಿಜೆಪಿ ಅಧ್ಯಕ್ಷ ವಿಜಯಕುಮಾರ ಚೆಂಗಟಾ, ಶಶಿಕಲಾ ತೆಂಗಳಿ, ಈಶ್ವರಸಿಂಗ ಠಾಕೂರ, ಶರಣಪ್ಪ ತಳವಾರ ಇನ್ನಿತರಿದ್ದರು ಇದ್ದರು.