ಹುಬ್ಬಳ್ಳಿ:
ಸಿದ್ದು ರಾಜೀನಾಮೆ ನೀಡಲಿ:ಕೋರ್ಟ್ ಆದೇಶ ಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ. ಅಧಿಕಾರದಲ್ಲಿದ್ದರೆ ತನಿಖೆ ಮೇಲೆ ಪ್ರಭಾವ ಖಚಿತ. ಆದಕಾರಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಯಾವುದೇ ತನಿಖೆ ಎದುರಿಸುವುದು ಸರಿಯಲ್ಲ ಎಂದು ಇದೇ ಸಿದ್ದರಾಮಯ್ಯ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಹೇಳಿದ್ದರು. ಅದನ್ನು ನೆನಪಿಸಿಕೊಳ್ಳಬೇಕು. ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೈಕೋರ್ಟ್ ಆದೇಶ ಪಾಲಿಸಬೇಕು ಎಂದರು.ಸರ್ಕಾರ ವಿಸರ್ಜಿಸಿ:
ಸಿದ್ದರಾಮಯ್ಯ ಕಾಂಗ್ರೆಸ್ನ ಕೊನೆಯ ಮುಖ್ಯಮಂತ್ರಿ. ಏಕೆಂದರೆ ಕಾಂಗ್ರೆಸ್ನಲ್ಲಿ ಸಿಎಂ ರೇಸ್ನಲ್ಲಿ ಬಹಳಷ್ಟು ಮಂದಿ ಇದ್ದಾರೆ. ಗೋರಿಗೆ ಹೋಗುವವರು ಸಹ ಪಾಳೆ ಹಚ್ಚಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರೇ ಕೊನೆಯ ಮುಖ್ಯಮಂತ್ರಿಯಾಗುತ್ತಾರೆ. ಆದಕಾರಣ ಕರ್ನಾಟಕ ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ಯತ್ನಾಳ ಹೇಳಿದರು.ಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂದಿರುವ ಸಚಿವ ಜಮೀರ್ ಅಹ್ಮದ ತಲೆಯಲ್ಲಿ ಮೆದುಳು ಇದೆಯೋ ಅಥವಾ ಮಾಂಸ ತುಂಬಿದೆಯೋ ಗೊತ್ತಿಲ್ಲ. ಕೋರ್ಟ್ ತೀರ್ಪಿನ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ ಇವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗಬೇಕು ಎಂದರು.
ಅಡ್ಜೆಸ್ಮೆಂಟ್ ರಾಜಕಾರಣ:ಸಿದ್ದರಾಮಯ್ಯ ತಮ್ಮ ವಿರುದ್ಧ ಕೆಲವರು ಅಡ್ಜಸ್ಟ್ಮೆಂಟ್ ಆಗಿದ್ದಾರೆ ಎಂದು ಹೇಳುತ್ತಾರೆ. ಮೊದಲು ಅವರ ಹೊಂದಾಣಿಕೆ ರಾಜಕಾರಣದ ಬಗ್ಗೆ ಹೇಳಲಿ. ನಾನು ಸದನದಲ್ಲೇ ಹೊಂದಾಣಿಕೆ ರಾಜಕಾರಣದ ಬಗ್ಗೆ ಹೇಳಿದ್ದೇನೆ ಎಂದರು. ಬಿಜೆಪಿ ಭ್ರಷ್ಟಾಚಾರಿಗಳಿಲ್ಲವ ಎಂಬ ಕಾಂಗ್ರೆಸ್ ಪ್ರಶ್ನೆಗೆ, ಭ್ರಷ್ಟಾಚಾರಿಗಳೆಲ್ಲ ಜೈಲು ಸೇರಲಿ. ಭ್ರಷ್ಟರೆಲ್ಲರೂ ಜೈಲಿಗೆ ಹೋದರೆ ಹೊಸ ರಾಜಕೀಯ ಯುಗ ಆರಂಭಗೊಳ್ಳುತ್ತದೆ ಎಂದ ಯತ್ನಾಳ, ಹೊಂದಾಣಿಕೆ ರಾಜಕಾರಣದಿಂದಲೇ ರಾಜ್ಯಕ್ಕೆ ಇಂತಹ ದುಸ್ಥಿತಿ ಬಂದಿದೆ. ಇಷ್ಟೆಲ್ಲ ಪ್ರಕರಣಗಳೆಲ್ಲ ಹೊರಬರುತ್ತಿವೆ. ಕುಮಾರ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸಿದ್ದೇವೆ. ಹಲವು ಸಮಾನ ಮನಸ್ಕರು ಸಭೆ ಮಾಡಿದ್ದೇವೆ ಎಂದರು.
ಬಿಜೆಪಿ ಶುದ್ಧೀಕರಣದ ಕುರಿತು ಕೇಳಿದ ಪ್ರಶ್ನೆಗೆ, ಶುದ್ಧೀಕರಣ ಮಾಡುವುದಕ್ಕೆ ಗಂಗಾನದಿಯಿಂದ ನೀರು ತರಿಸುತ್ತಿದ್ದೇವೆ. ಬೆಂಗಳೂರಷ್ಟೇ ಅಲ್ಲ. ಬೀದರ್ನಿಂದ ಹಿಡಿದು ಚಾಮರಾಜನಗರ ವರೆಗೂ ಸ್ವಚ್ಛವಾಗಬೇಕಿದೆ ಎಂದರು.ರಾಜ್ಯಾಧ್ಯಕ್ಷ ವಿಜಯೇಂದ್ರ ಕುರಿತ ಪ್ರಶ್ನೆಗೆ, ಪಕ್ಷದ ವೇದಿಕೆಯಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಏನು ಕ್ರಮಕೈಗೊಳ್ಳುತ್ತಾರೆ ಎನ್ನುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದರು.
ಹೈಕಮಾಂಡ್ಗೆ ಬಿಟ್ಟ ವಿಚಾರ:ಈಶ್ವರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಅವರನ್ನು ಪಕ್ಷಕ್ಕೆ ತೆಗೆದುಕೊಂಡರೆ ನಾವು ಸ್ವಾಗತಿಸುತ್ತೇವೆ. ಈಶ್ವರಪ್ಪ ನಡೆ ಹಿಂದುತ್ವದ ಕಡೆ. ಈಶ್ವರಪ್ಪ ನಡೆ ಬಿಜೆಪಿ ಕಡೆಗೆ ಎಂದಷ್ಟೇ ಹೇಳಬಹುದು ಎಂದು ಯತ್ನಾಳ ಹೇಳಿದರು.