- ಎನ್.ಬಿ.ಪ್ರದೀಪ್ ಕುಮಾರ್ ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಹೊಸ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪ ಪದವೀಧರರ ಕ್ಷೇತ್ರ ಮತದಾರರ ನೋಂದಣಿ ಸಹಾಯ ಕಚೇರಿಯನ್ನು ಶನಿವಾರ ಉದ್ಘಾಟಿಸಲಾಯಿತು.ಈ ಸಂದರ್ಭ ಪದವೀಧರ ಕ್ಷೇತ್ರದ ಬಿಜೆಪಿ ಆಕಾಂಕ್ಷಿ, ತುಮಕೂರಿನ ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ ಮಾತನಾಡಿ, ಪದವೀಧರರು ಈ ದೇಶದ ಆಸ್ತಿ. ಪದವೀಧರ ಧ್ವನಿ ಜನತಂತ್ರದ ಪ್ರತಿಧ್ವನಿಯಾಗಿ ಮೊಳಗಬೇಕು. ಈ ನಿಟ್ಟಿನಲ್ಲಿ ಪದವೀಧರ ನೋಂದಣಿ ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕಾಗಿದೆ. ಸದೃಢ ದೇಶ ನಿರ್ಮಾಣದಲ್ಲಿ ಪದವೀಧರರು ಸಕ್ರಿಯವಾಗಿ ಕೈ ಜೋಡಿಸಬೇಕು. ಅದು ನಿಮ್ಮ ಕರ್ತವ್ಯವಾಗಿದೆ ಎಂದರು.
ಪದವೀಧರರು ಹೆಸರು ನೋಂದಾಯಿಸಿಕೊಳ್ಳುವ ಕಾಲಾವಕಾಶವನ್ನು ಡಿ.10ರವರೆಗೂ ವಿಸ್ತರಿಸಲಾಗಿದೆ. ಎಲ್ಲ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 6366916892 / 9742921381 ಇಲ್ಲಿಗೆ ಸಂಪರ್ಕಿಸಲು ತಿಳಿಸಿದರು.
- - --9ಕೆಡಿವಿಜಿ35:
ದಾವಣಗೆರೆಯಲ್ಲಿ ಎನ್.ಬಿ.ಪ್ರದೀಪ್ ಕುಮಾರ್ ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟಿಸಲಾಯಿತು.