ಕನ್ನಡಪ್ರಭ ವಾರ್ತೆ ಕುಶಾಲನಗರ
ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಲಿಖಿತಾ ಟಿ.ಎ., ವಿವೇಕಾನಂದ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ವಾಣಿಜ್ಯ ವಿಭಾಗದ ಉಪನ್ಯಾಸಕ ಸ್ವಾಮಿ ಗೌಡ ಹಾಗೂ ಕಚೇರಿ ಅಧೀಕ್ಷಕ ಮಹೇಶ್ ಆಮೀನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೃತೀಯ ಬಿಕಾಂ ಹಾಗೂ ಬಿಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಸಾಧನೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ತೃತೀಯ ಬಿಕಾಂ ವಿಭಾಗದ ಮನೀಷ್ ಹಾಗೂ ತೃತೀಯ ಬಿಸಿಎ ವಿಭಾಗದ ತೃಪ್ತಿ ಅವರಿಗೆ ವಿಶೇಷ ಬಹುಮಾನ ನೀಡಿ ಗೌರವಿಸಲಾಯಿತು.ದೀಪ್ತಿ ಡಿಸೋಜ ನಿರೂಪಿಸಿದರು.