ಭವಿಷ್ಯದ ಬದುಕಿಗೆ ಪದವಿಯನ್ನು ಅಡಿಪಾಯ ಮಾಡಿಕೊಳ್ಳಿ

KannadaprabhaNewsNetwork |  
Published : Apr 04, 2025, 12:47 AM IST
5 | Kannada Prabha

ಸಾರಾಂಶ

ಮಾನವಕುಲದ ಒಳಿತೇ ಪ್ರಮುಖ ಗುರಿಯಾಗಬೇಕು. ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮೈಸೂರುಪದವಿ ಭವಿಷ್ಯದ ಬದುಕಿಗೆ ಅಡಿಪಾಯವನ್ನಾಗಿ ಮಾಡಿಕೊಂಡು, ಲಭ್ಯ ಇರುವ ಅವಕಾಶ ಬಳಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಎಸ್. ಆಲೂರ್ ಕಿವಿಮಾತು ಹೇಳಿದರು. ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ 32ನೇ ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವಕುಲದ ಒಳಿತೇ ಪ್ರಮುಖ ಗುರಿಯಾಗಬೇಕು. ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು. ತಂತ್ರಜ್ಞಾನಗಳು ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಈಗಿನ ಕಾಲಘಟ್ಟದಲ್ಲಿ ನಾವು ನಿತ್ಯವೂ ಅಪ್‌ ಡೇಟ್ ಆಗುತ್ತಿರಬೇಕು. ಇದಕ್ಕಾಗಿ ಹೊಸ ಸಂಗತಿ ಓದಿಕೊಳ್ಳಬೇಕು. ತಿಳಿದುಕೊಂಡಿದ್ದನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದು ಅವರು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಡಾ. ಹನುಮಂತಾಚಾರ್‌ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಂ. ಸುಬ್ರಾಯ, ಗೌರವ ಕಾರ್ಯದರ್ಶಿ ಆರ್. ದಿನೇಶ್, ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ, ಪ್ರೊ.ಟಿ.ಕೆ. ಉಮೇಶ್‌ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ