ಎಸಿ ಕಚೇರಿ ಬಳಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ

KannadaprabhaNewsNetwork |  
Published : Jul 22, 2025, 12:00 AM IST
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಹಲ್ಲೆಗೊಳಗಾದ ಗ್ರಾಪಂ ಅಧ್ಯಕ್ಷ ರಂಗಸ್ವಾಮಿ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಉಪ ವಿಭಾಗಾಧಿಕಾರಿಗಳ ಕಚೇರಿಯ ಕಾಂಪೌಂಡ್ ಪಕ್ಕದಲ್ಲಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದು, ಬಲವಂತವಾಗಿ ರಾಜೀನಾಮೆಗೆ ಒತ್ತಾಯಿಸಿದ ಸದಸ್ಯರು ಮತ್ತು ಮುಖಂಡರು ಅಧ್ಯಕ್ಷನ ಬಟ್ಟೆ ಹರಿದು ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಬಳಿ ಸೋಮವಾರ ನಡೆದಿದೆ.

ದೊಡ್ಡಬಳ್ಳಾಪುರ: ಉಪ ವಿಭಾಗಾಧಿಕಾರಿಗಳ ಕಚೇರಿಯ ಕಾಂಪೌಂಡ್ ಪಕ್ಕದಲ್ಲಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದು, ಬಲವಂತವಾಗಿ ರಾಜೀನಾಮೆಗೆ ಒತ್ತಾಯಿಸಿದ ಸದಸ್ಯರು ಮತ್ತು ಮುಖಂಡರು ಅಧ್ಯಕ್ಷನ ಬಟ್ಟೆ ಹರಿದು ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಬಳಿ ಸೋಮವಾರ ನಡೆದಿದೆ.

ನೆಲಮಂಗಲ ತಾಲೂಕು ಅರೇಬೊಮ್ಮನಹಳ್ಳಿಯ ಹಾಲಿ ಅಧ್ಯಕ್ಷ ರಂಗಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಬಚಾವ್ ಆಗಲು ಆತ ಎಸಿ ಕಚೇರಿಗೆ ಓಡಿ ಹೋಗಿ ಪೊಲೀಸ್ ರಕ್ಷಣೆ ಪಡೆದಿದ್ದಾರೆ. ಹಲ್ಲೆ ನಡೆಸಿದ ಸದಸ್ಯರು ಅಧ್ಯಕ್ಷನ ವಿರುದ್ಧವೇ ದೂರು ನೀಡಲು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿದ ಅಧ್ಯಕ್ಷ ರಂಗಸ್ವಾಮಿ, ನಾನು ಪರಿಶಿಷ್ಟ ಸಮುದಾಯಕ್ಕೆ ಸೇರಿದವ ಎಂಬ ಕಾರಣಕ್ಕೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸದಸ್ಯರು ಒತ್ತಾಯಿಸುತ್ತಿದ್ದರು. ಪಂಚಾಯಿತಿಯಲ್ಲಿ ಹಳೇ ಅಧ್ಯಕ್ಷರ ಲಾಗಿನ್ ನಲ್ಲಿ ₹29 ಲಕ್ಷ ಹಣ ದುರ್ಬಳಕೆ ಮಾಡಿದ್ದರು. ಅಧ್ಯಕ್ಷನಾಗಿ ಇದನ್ನ ಪ್ರಶ್ನಿಸಿದ ಕಾರಣಕ್ಕೆ ನನ್ನನ್ನು ಬಲವಂತವಾಗಿ ರಾಜೀನಾಮೆ ಕೊಡಿಸಲು ಸಂಚು ನಡೆಸಿದ್ದಾರೆ ಎಂದು ಆರೋಪಿಸಿದರು.

ನಾವು ಸದಸ್ಯ ಸ್ಥಾನಗಳಿಗೆ ರಾಜೀನಾಮೆ ಕೊಡುವುದಾಗಿ ಹೇಳಿದ್ದ ಅವರು, ಜೊತೆಯಲ್ಲಿ ಅಧ್ಯಕ್ಷರು ಇರಬೇಕೆಂದು ನನ್ನನ್ನು ಕರೆದುಕೊಂಡು ಬಂದಿದ್ದರು. ಎಸಿ ಕಚೇರಿಗೆ ಬಂದ ನಂತರ ರಾಜೀನಾಮೆ ಕೊಡುವಂತೆ ಹೇಳಿದರು. ಪಂಚಾಯಿತಿಯಲ್ಲೇ ರಾಜೀನಾಮೆ ಕೊಡುವುದಾಗಿ ಹೇಳಿದೆ. ಇದರಿಂದ ಕೆರಳಿದ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ, ಬಟ್ಟೆಯನ್ನ ಹರಿದು ಹಾಕಿದ್ದಾರೆ. ಪ್ರಾಣ ರಕ್ಷಣೆಗಾಗಿ ನಾನು ಎಸಿ ಕಚೇರಿಗೆ ಓಡಿ ಬಂದೆ. ಇಲ್ಲಿನ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಪೊಲೀಸರನ್ನ ಕರೆಸಿಕೊಂಡರು ಎಂದು ತಿಳಿಸಿದರು.

ಹಲ್ಲೆಗೊಳಗಾದ ರಂಗಸ್ವಾಮಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಕ್ಸ್‌..............

ಅವರೇ ಬಟ್ಟೆ ಹರಿದುಕೊಂಡರು: ಸ್ಪಷ್ಟನೆ

ರಂಗಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಂದ್ರ, 8 ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆಯನ್ನು ಅಧ್ಯಕ್ಷರಾದ ರಂಗಸ್ವಾಮಿಗೆ ನೀಡಿದ್ದಾರೆ. ಅವರು ಸ್ವೀಕರಿಸದ ಹಿನ್ನೆಲೆ ಎಸಿ ಕಚೇರಿಗೆ ರಾಜೀನಾಮೆ ಕೊಡಲು ಬಂದಿದ್ದಾರೆ. ಈ ವೇಳೆ ರಂಗಸ್ವಾಮಿ ಬಂದು ನಮ್ಮ ಮೇಲೆಯೇ ಹಲ್ಲೆ ಮಾಡಿದ್ದಾರೆ. ಬಟ್ಟೆಯನ್ನ ಅವರೇ ಹರಿದುಕೊಂಡು ನಮ್ಮ ವಿರುದ್ಧ ಸುಳ್ಳ ಆರೋಪ ಮಾಡಲಾಗಿದೆ. ₹29 ಲಕ್ಷದ ಭ್ರಷ್ಟಚಾರ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಅದರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆಂದು ಹೇಳಿದ್ದಾರೆ.

21ಕೆಡಿಬಿಪಿ3-

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಹಲ್ಲೆಗೊಳಗಾದ ಗ್ರಾಪಂ ಅಧ್ಯಕ್ಷ ರಂಗಸ್ವಾಮಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ