ಸುವರ್ಣ ಆರೋಗ್ಯ ಶಿಬಿರಕ್ಕೆ ಅದ್ಧೂರಿ ತೆರೆ

KannadaprabhaNewsNetwork |  
Published : Jan 12, 2026, 02:15 AM IST
ಹುಬ್ಬಳ್ಳಿಯಲ್ಲಿ ನಡೆದ ಸುವರ್ಣ ಆರೋಗ್ಯ ಶಿಬಿರ | Kannada Prabha

ಸಾರಾಂಶ

ಎರಡು ದಿನಗಳ ಕಾಲ ನಡೆದ ಆರೋಗ್ಯ ಶಿಬಿರಕ್ಕೆ ಜನಸಾಗರವೇ ಹರಿದುಬಂದಿತ್ತು.

ಹುಬ್ಬಳ್ಳಿ: ಇಲ್ಲಿನ ಇಂದಿರಾ ಗಾಜಿನ ಮನೆಯಲ್ಲಿ "ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ " ಸಹಯೋಗದೊಂದಿಗೆ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಸುವರ್ಣ ಆರೋಗ್ಯ ಶಿಬಿರಕ್ಕೆ ಭಾನುವಾರ ತೆರೆ ಎಳೆಯಲಾಯಿತು.

ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ನಡೆದ ಶಿಬಿರದಲ್ಲಿ ನಾರಾಯಣ ಹೃದಯಾಲಯ, ವಿಹಾನ್‌ ಆಸ್ಪತ್ರೆ, ಸುಚಿರಾಯು ಆಸ್ಪತ್ರೆ, ವಿ ಕೇರ್‌, ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ, ಕೆಎಲ್‌ಇ ಮೆಡಿಕಲ್‌ ಕಾಲೇಜು, ಎಚ್‌ಸಿಜಿ, ಡಾ. ರವಿ ಪಾಟೀಲ ಹೆಲ್ತ್‌ ಇನ್‌ಸ್ಟಿಟ್ಯೂಟ್‌, ಗುಡುಚಿ ಆಯುರ್ವೇದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯುನಿವರ್ಸಿಟಿ, ಸಂತೋಷ ಲಾಡ್‌ ಫೌಂಡೇಶನ್‌, ಸೂರಣ್ಣವರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಸಂಜೀವಿನಿ ಆಯುರ್ವೇದ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ, ಸಕ್ರಾ ವರ್ಡ್‌ ಆಸ್ಪತ್ರೆ ಸೇರಿದಂತೆ 20ಕ್ಕೂ ಅಧಿಕ ಪ್ರತಿಷ್ಠಿತ ಸಂಸ್ಥೆಗಳು ಶಿಬಿರದಲ್ಲಿ ಪಾಲ್ಗೊಂಡು ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದರು. ಜತೆಗೆ ಆರೋಗ್ಯ ಪರಿಹಾರೋಪಾಯಗಳು ಕುರಿತು ಮಾರ್ಗದರ್ಶನ, ಆರೋಗ್ಯ ಕುರಿತು ಜಾಗೃತಿ ಮೂಡಿಸುವುದರ ಜತೆಗೆ, ಮುಂಜಾಗ್ರತಾ ವಹಿಸಲು ಸಲಹೆಗಳನ್ನು ನೀಡಿದರು.

ಶಿಬಿರದಲ್ಲಿ ಭಾನುವಾರ ಬೆಳಗ್ಗೆ ಕೋವಿಡ್‌ ನಂತರದ ಹೃದಯಾಘಾತದ ಪ್ರಕರಣ ಹೆಚ್ಚಳ ವಿಷಯ ಕುರಿತು ಹೃದ್ರೋಗ ತಜ್ಞ ಡಾ. ಅಮಿತ್‌ ಸತ್ತೂರ ಸಂವಾದ ನಡೆಸಿದರು. ಕ್ಯಾನ್ಸರ್‌ ಚಿಕಿತ್ಸಾ ವಿಧಾನದ ಕುರಿತು ಡಾ. ಪವನಕುಮಾರ, ನಾರಾಯಣ ಹೃದಯಾಲಯದ ಡಾ. ವಿವೇಕಾನಂದ ಗಜಪತಿ ಅವರು ಚಳಿಗಾಲದಲ್ಲಿ ಹೃದಯ ಸ್ತಂಭನ ಕುರಿತು ಸಂವಾದ ನಡೆಸಿದರು.

ಎರಡು ದಿನಗಳ ಕಾಲ ಆಯೋಜಿಸಿದ ಸುವರ್ಣ ಆರೋಗ್ಯ ಶಿಬಿರದಿಂದ ಈ ಭಾಗದ ಜನರಿಗೆ ಹೆಚ್ಚಿನ ಅನಕೂಲವಾಗಿದೆ. ಇದೇ ರೀತಿ ಪ್ರತಿ ವರ್ಷವೂ ಆರೋಗ್ಯ ಶಿಬಿರ ಆಯೋಜಿಸುವಂತಾಗಲಿ ಎಂದು ಹಳೇ ಹುಬ್ಬಳ್ಳಿ ನಿವಾಸಿ ಅಮರೇಗೌಡ ಪಾಟೀಲ ಹೇಳಿದರು.

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ಸಂಸ್ಥೆಯ ಕಾರ್ಯ ಶ್ಲಾಘನೀಯ. ಉಳ್ಳವರು ಮಾತ್ರ ಗುಣಮಟ್ಟದ ಚಿಕಿತ್ಸೆ ಪಡೆದುಕೊಳ್ಳುವ ಕಾಲದಲ್ಲಿ ಉಚಿತವಾಗಿ ಆರೋಗ್ಯ ಚಿಕಿತ್ಸಾ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ಧಾರವಾಡ ತಾಲೂಕಿನ ಬಾಡ ಗ್ರಾಮದ ನಿವಾಸಿ ಅಕ್ಕಮ್ಮ ಜೋಡರಳ್ಳಿ ಹೇಳಿದರು,

ಮೊದಲ ಬಾರಿಗೆ ಇಂತಹ ಬೃಹತ್‌ ಆರೋಗ್ಯ ಶಿಬಿರ ಆಯೋಜಿಸಿರುವುದು ಈ ಭಾಗದ ಜನರಿಗೆ ಹೆಚ್ಚಿನ ಅನಕೂಲವಾಗಿದೆ. ಜನರ ಆರೋಗ್ಯ ಕಾಳಜಿ ಗಮನದಲ್ಲಿಟ್ಟುಕೊಂಡು ಶಿಬಿರ ಆಯೋಜಿಸಿರುವ ಸಂಸ್ಥೆಗೆ ಅಭಿನಂದನೆ ಸಲ್ಲಿಸುವೆ ಎಂದು ಅಳಗವಾಡಿ ನಿವಾಸಿ ಈರಮ್ಮ ಹಿರೇಮಠ ಹೇಳಿದರು.ಕೇವಲ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡದೇ ಜನರ ಆರೋಗ್ಯ ಕಾಳಜಿ ಗಮನದಲ್ಲಿಟ್ಟುಕೊಂಡು ಆರೋಗ್ಯ ಶಿಬಿರ ಆಯೋಜಿಸಿರುವ ಸಂಸ್ಥೆ ಕಾರ್ಯಕ್ಕೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಕುಂದಗೋಳ ತಾಲೂಕಿನ ಬರದ್ವಾಡ ನಿವಾಸಿ ಪರಸಪ್ಪ ರಿತ್ತಿ ತಿಳಿಸಿದರು.

ಮೊದಲ ಬಾರಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದರೂ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲೂ ಇದೇ ಮಾದರಿಯಲ್ಲಿ ಆರೋಗ್ಯ ಶಿಬಿರ ಆಯೋಜಿಸುವಂತಾಗಲಿ ಎಂದು ಸವಿತಾ ಧಾರವಾಡದ ನಿವಾಸಿ ಕಡಕೋಳ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ