ಹುಬ್ಬಳ್ಳಿ:
ಗಣೇಶ ಚತುರ್ಥಿ ದಿನದಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಗೆ ಬುಧವಾರ ಮಧ್ಯಾಹ್ನದ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಮಧ್ಯಾಹ್ನ 12ಕ್ಕೆ ಮೈದಾನದಿಂದ ಗಣೇಶನ ಮೂರ್ತಿಯನ್ನು ಹೊರಗೆ ತರಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸಭಾ ಕಾರ್ಯಕ್ರಮ ನಡೆಸಿ ಬಳಿಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಸಭಾ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲಜಿ ಮಾತನಾಡಿ, ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಸಾಕಷ್ಟು ಅಡ್ಡಿ ಎದುರಾಗಿತ್ತು. ಗಣೇಶನ ಪ್ರತಿಷ್ಠಾಪನೆ ಮಾಡಿದರೆ ಗಲಾಟೆಯಾಗುತ್ತದೆ ಎಂದು ಹಲವರು ಆತಂಕ ಪಟ್ಟಿದ್ದರು. ಆದರೆ, ಇಲ್ಲಿ ಗಣೇಶೋತ್ಸವವನ್ನು 5 ವರ್ಷದಿಂದ ಆಚರಿಸಲಾಗುತ್ತಿದೆ. ಒಂದೇ ಒಂದು ಸಣ್ಣ ಗಲಾಟೆಯೂ ಆಗಿಲ್ಲ ಎಂದರು.ಸದ್ಯ 3 ದಿನದ ವರೆಗೆ ಅಷ್ಟೇ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಅದು 21 ದಿನಕ್ಕೆ ವಿಸ್ತರಣೆ ಆಗಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದ ಅವರು, ಹಿಂದೂಗಳು ಶಾಂತಿಪ್ರಿಯರು. ಆದರೆ, ನಮ್ಮ ತಂಟೆಗೆ ಬಂದರೆ ತಕ್ಕ ಉತ್ತರ ನೀಡುವ ಸಾಮರ್ಥ್ಯ ಇದೆ ಎಂದು ಸ್ಪಷ್ಟಪಡಿಸಿದರು.
ಕುಣಿದು ಕುಪ್ಪಳಿಸಿದರು:
ಮೆರವಣಿಗೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ಮೇಯರ್ ದುರ್ಗಮ್ಮ ಬಿಜವಾಡ, ರಂಗಾಬದ್ಧಿ, ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ನ ಮಾಲೀಕ ವಿಎಸ್ವಿ ಪ್ರಸಾದ, ಪಾಲಿಕೆ ಸದಸ್ಯರಾದ ಜ್ಯೋತಿ ಪಾಟೀಲ, ಶಿವು ಮೆಣಸಿನಕಾಯಿ, ಸಂತೋಷ ಚವ್ಹಾಣ, ಉಮಾ ಮುಕ್ಕುಂದ, ಮುಖಂಡರಾದ ಉಮೇಶ ದುಶಿ, ಸುಭಾಸಸಿಂಗ್ ಜಮಾದಾರ, ಮಹೇಂದ್ರ ಕೌತಾಳ, ಈಶ್ವರಗೌಡ ಪಾಟೀಲ ಸೇರಿದಂತೆ ಹಲವರಿದ್ದರು.