ಸಿದ್ದರಬೆಟ್ಟದಲ್ಲಿಂದು ಅದ್ಧೂರಿ ಹನುಮ ಜಯಂತಿ

KannadaprabhaNewsNetwork |  
Published : Dec 24, 2023, 01:45 AM IST
ಪೋಟೋ 2 : ನಿಜಗಲ್ ಸಿದ್ದರಬೆಟ್ಟ  | Kannada Prabha

ಸಾರಾಂಶ

ದಾಬಸ್‌ಪೇಟೆ: ಐತಿಹಾಸಿಕ ಹಿನ್ನಲೆಯ ನಿಜಗಲ್ ಸಿದ್ದರಬೆಟ್ಟದಲ್ಲಿ ಡಿ.24ರಂದು ಅದ್ಧೂರಿ ಹನುಮ ಜಯಂತಿ ಆಚರಿಸಲಾಗುತ್ತಿದ್ದು ಹತ್ತು ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಬೆಟ್ಟಕ್ಕೆ ಭೇಟಿ ನೀಡಿ ಹನುಮನ ದರ್ಶನ ಪಡೆಯುವ ನಿರೀಕ್ಷೆಯಿದೆ.

ದಾಬಸ್‌ಪೇಟೆ: ಐತಿಹಾಸಿಕ ಹಿನ್ನಲೆಯ ನಿಜಗಲ್ ಸಿದ್ದರಬೆಟ್ಟದಲ್ಲಿ ಡಿ.24ರಂದು ಅದ್ಧೂರಿ ಹನುಮ ಜಯಂತಿ ಆಚರಿಸಲಾಗುತ್ತಿದ್ದು ಹತ್ತು ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಬೆಟ್ಟಕ್ಕೆ ಭೇಟಿ ನೀಡಿ ಹನುಮನ ದರ್ಶನ ಪಡೆಯುವ ನಿರೀಕ್ಷೆಯಿದೆ.

ಬೆಟ್ಟಕ್ಕೆ ಸಿಂಗಾರ: ನಿಜಗಲ್‌ ಸಿದ್ದರಬೆಟ್ಟ ಸೇವಾ ಸಮಿತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಹನುಮ ಜಯಂತಿ ಆಚರಿಸಲಿದ್ದು, ಯುವ ಮುಖಂಡ ಜಗದೀಶ್ ಚೌಧರಿ ಅವರು ಅತ್ಯಾಧುನಿಕ ವಿದ್ಯುತ್ ಲೇಸರ್ ಕಿರಣಗಳು ಮತ್ತು ವಿದ್ಯುತ್ ದೀಪಗಳಿಂದ ಸುಮಾರು 3,568 ಅಡಿ ಎತ್ತರವಿರುವ ಇಡೀ ಬೆಟ್ಟಕ್ಕೆ ಅಲಂಕಾರ ಮಾಡಿಸಿದ್ದಾರೆ.

ಭಕ್ತರಿಗೆ ಅನ್ನದಾಸೋಹ:

ಬರುವ ಭಕ್ತಾಧಿಗಳಿಗೆ ಊಟದ ವ್ಯವಸ್ಥೆಯಿದ್ದು, ಕನ್ನಡ ಸಂಸೃತಿ ಇಲಾಖೆಯ ಸಾಂಸ್ಕೃತಿಕ ಕಲಾ ತಂಡಗಳಿಂದ ಜಾನಪದ ನೃತ್ಯಗಳು, ವೀರಗಾಸೆ, ಡೊಳ್ಳು ಕುಣಿತ ಕಾರ್ಯಕ್ರಮಗಳು ನಡೆಯಲಿವೆ. ದಾಬಸ್‌ಪೇಟೆ ಮಹಿಳಾ ಸಂಘದಿಂದ ಶಿವಗಂಗೆ ವೃತ್ತದಿಂದ ಸಿದ್ದರಬೆಟ್ಟದವರೆಗೂ ಪೂರ್ಣಕುಂಭ ಸ್ವಾಗತ ಕೋರಲಿದ್ದಾರೆ.

ಪೌರಣಿಕ ನಾಟಕ ಪ್ರದರ್ಶನ: ಭಾನುವಾರ ಮದಾಹ್ನ 1 ಗಂಟೆಗೆ ಶ್ರೀ ರಾಮಾಂಜಿನೇಯ ಕೃಪಾಪೋಷಿತ ನಾಟಕ ಮಂಡಳಿಯಿಂದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಿದ್ದು, ಸಂಜೆ 5 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಪೋಟೋ 2 : ನಿಜಗಲ್ ಸಿದ್ದರಬೆಟ್ಟ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌