ಸತ್ಯಾತ್ಮತೀರ್ಥ ಸ್ವಾಮೀಜಿಯ ಚಾತುರ್ಮಾಸ್ಯದ ಭವ್ಯ ಮೆರವಣಿಗೆ

KannadaprabhaNewsNetwork |  
Published : Aug 08, 2026, 02:15 AM IST
31ನೇ ಚಾತುರ್ಮಾಸ್ಯದ ನಿಮಿತ್ತ ಧಾರವಾಡಕ್ಕೆ ಆಗಮಿಸಿದ ಉತ್ತರಾದಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿಯವರನ್ನು ಶುಕ್ರವಾರ ಭವ್ಯ ಶೋಭಾಯಾತ್ರೆಯ ಮೂಲಕ ಭಕ್ತರು ಸ್ವಾಗತಿಸಿದರು. | Kannada Prabha

ಸಾರಾಂಶ

31ನೇ ಚಾತುರ್ಮಾಸ್ಯದ ನಿಮಿತ್ತ ನಗರಕ್ಕೆ ಆಗಮಿಸಿದ ಉತ್ತರಾದಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿ ಅವರನ್ನು ಶುಕ್ರವಾರ ಭವ್ಯ ಶೋಭಾಯಾತ್ರೆಯ ಮೂಲಕ ಭಕ್ತರು ಸ್ವಾಗತಿಸಿದರು.

ಧಾರವಾಡ:

31ನೇ ಚಾತುರ್ಮಾಸ್ಯದ ನಿಮಿತ್ತ ನಗರಕ್ಕೆ ಆಗಮಿಸಿದ ಉತ್ತರಾದಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿ ಅವರನ್ನು ಶುಕ್ರವಾರ ಭವ್ಯ ಶೋಭಾಯಾತ್ರೆಯ ಮೂಲಕ ಭಕ್ತರು ಸ್ವಾಗತಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತ ಸಾಗರವೇ ಪಾಲ್ಗೊಂಡು ಭಕ್ತಿ ಪರಾಕಾಷ್ಠೆ ಮೆರೆದರು. ನಗರದ ಹೆಡ್‌ ಪೋಸ್ಟ್ ಬಳಿಯ ಉಳವಿ ಚೆನ್ನಬಸವೇಶ್ವರ ವೃತ್ತದಿಂದ ಆರಂಭವಾದ ಶೋಭಾಯಾತ್ರೆ ಮಾಳಮಡ್ಡಿ ಗೋಪಾಲಪುರದ ಉತ್ತರಾದಿಮಠದ ವರೆಗೆ ಸಾಗಿತು. ಭಕ್ತರು ಹರಿ ಸರ್ವೋತ್ತಮ–ವಾಯು ಜೀವೋತ್ತಮ, ವಾಸುದೇವ ಹರಿ ಎಂಬ ಘೋಷಣೆಗಳು ಮೊಳಗಿಸಿದರು. ವಾದ್ಯ ಮೇಳ, ಭಜನಾ ಮಂಡಳಿ, ಮಹಿಳೆಯರ ಕೋಲಾಟ ಹಾಗೂ ಯುವಕರ ಉತ್ಸಾಹಭರಿತ ಘೋಷಣೆಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಅಪಾರ ಸಂಖ್ಯೆಯ ಭಕ್ತರು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಚಾತುರ್ಮಾಸ್ಯದ ಅವಧಿಯಲ್ಲಿ ಧಾರವಾಡ ಉತ್ತರಾದಿಮಠದಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರವಚನಗಳು ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುತ್ತಿಗೆ ಉದ್ಯೋಗಕ್ಕಾಗಿ ಹರಿದು ಬಂದ ಉದ್ಯೋಗಾಕಾಂಕ್ಷಿಗಳು
ಮೊಬೈಲ್ ದುರ್ಬಳಕೆಯಿಂದ ಹಾಳಾಗಬೇಡಿ