ಬಾಗಲಕೋಟೆಯಲ್ಲಿ ಹಿಂದೂಗಳ ಭವ್ಯ ಶೋಭಾಯಾತ್ರೆ

KannadaprabhaNewsNetwork |  
Published : Feb 22, 2026, 03:00 AM IST
(ಫೋಟೊಬಿಕೆಟಿ6,(1) ಶೋಭಾಯಾತ್ರೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಸಂಸದ ಪಿ.ಸಿ. ಗದ್ದಿಗೌಡರ, ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಗಣ್ಯರು ಬಾಗವಹಿದ್ದರು.) | Kannada Prabha

ಸಾರಾಂಶ

ಬಾಗಲಕೋಟೆಯ ನವನಗರದಲ್ಲಿ ಶನಿವಾರ ವಿರಾಟ್ ಹಿಂದೂ ಸಮ್ಮೇಳನ ನಿಮಿತ್ತ ಹಿಂದೂಗಳ ಭವ್ಯ ಶೋಭಾಯಾತ್ರೆ ನಡೆಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗುರುವಾರ ರಾತ್ರಿ ಹಳೇಬಾಗಲಕೋಟೆಯಲ್ಲಿ ನಡೆದ ಗಲಾಟೆ ಪ್ರಕರಣದ ಮಧ್ಯೆಯೂ ಇತ್ತ ನವನಗರದಲ್ಲಿ ಶನಿವಾರ ವಿರಾಟ್ ಹಿಂದೂ ಸಮ್ಮೇಳನ ನಿಮಿತ್ತ ಹಿಂದೂಗಳ ಭವ್ಯ ಶೋಭಾಯಾತ್ರೆ ನಡೆಯಿತು.

ನವನಗರದ ಉದ್ಭವ ಗಣೇಶ ದೇವಾಲಯದಿಂದ ಆರಂಭವಾದ ಶೋಭಾಯಾತ್ರೆಯಲ್ಲಿ ಯುವತಿಯರ ಡೊಳ್ಳು ಕುಣಿತ ಸೇರಿದಂತೆ ವಿವಿಧ ವಾಧ್ಯ ಕಲಾತಂಡಗಳ ಮೂಲಕ ಮೆರವಣಿಗೆ ನಡೆಯಿತು.

ಶೋಭಾಯಾತ್ರೆಯಲ್ಲಿ ವಿವಿಧ ದೇಶಭಕ್ತರ ವೇಷಧಾರಿ ಮಕ್ಕಳು ಗಮನ ಸೆಳೆದರು. ಪುಟಾಣಿ ಮಕ್ಕಳಿಂದ ಭಜನೆ, ಭವ್ಯ ಮೆರವಣಿಗೆಯಲ್ಲಿ ಸಾರೋಟಿನಲ್ಲಿ ಕುಳಿತ ಬಾಲಕ ಗಮನ ಸೆಳೆದ.

ಶೋಭಾಯಾತ್ರೆಯಲ್ಲಿ ನೂರಾರು ಜನ ಹಿಂದೂಗಳು ಸೇರಿದಂತೆ ಮಹಿಳೆಯರು ಸಹ ಪಾಲ್ಗೊಂಡಿದ್ದರು. ಶೋಭಾಯಾತ್ರೆ ಹಾಗೂ ಹಿಂದೂ ಸಮ್ಮೇಳನ ಹಿನ್ನೆಲೆ ಎಲ್ಲೆಡೆ ಪೋಲಿಸ ಬಿಗಿಭದ್ರತೆ ಮಾಲಾಗಿತ್ತು. ನವನಗರದ ಸೆಕ್ಟರ್ 52ರಲ್ಲಿ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.

ಸಂಸದ, ಶಾಸಕರು ಭಾಗಿ:

ಶೋಭಾಯಾತ್ರೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಸಂಸದ ಪಿ.ಸಿ. ಗದ್ದಿಗೌಡರ, ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಗಣ್ಯರು ಭಾಗವಹಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಐ ಶೃಂಗಸಭೆ ಕಾಂಗ್ರೆಸ್‌ ಅಡ್ಡಿಗೆ ಬಿಜೆಪಿ ಆಕ್ರೋಶ
ಕಲುಷಿತಗೊಳ್ಳುತ್ತಿರುವ ಜೀವ ನದಿ ಕಾವೇರಿ ಬಗ್ಗೆ ಇರಲಿ ಜಾಗೃತಿ