ಪ್ರತಿಮೆ ಮತ್ತು ಸುತ್ತಲಿನ ಉದ್ಯಾನವನ ಅಭಿವೃದ್ಧಿಗೆ ಶಾಸಕ ಡಾ. ಮಂತರ್ಗೌಡ ಮೂರು ಲಕ್ಷ ರು. ಗಳ ಅನುದಾನ ಒದಗಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ನಗರದಲ್ಲಿ ಸ್ಥಾಪಿತವಾಗಿರುವ ಸ್ವತಂತ್ರ ಭಾರತದ ಪ್ರಪ್ರಥಮ ಮಹಾನ್ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ನವರ ಪ್ರತಿಮೆ ಮತ್ತು ಸುತ್ತಲಿನ ಉದ್ಯಾನ ವನದ ಅಭಿವೃದ್ಧಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರು ತಮ್ಮ ಶಾಸಕರ ನಿಧಿಯಿಂದ ಮೂರು ಲಕ್ಷ ರು. ಗಳ ಅನುದಾನ ಒದಗಿಸಿದ್ದಾರೆ.ಮಂಗಳವಾರ ಶಾಸಕರು ಮಡಿಕೇರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಹಾಗೂ ಮಡಿಕೇರಿ ನಗರ ಸಭೆಯ ನಾಮನಿರ್ದೇಶನ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ ನವರು ಅಭಿವೃದ್ಧಿಗೆ ಸಂಬಂಧಿಸಿದ ಅಂದಾಜು ಪಟ್ಟಿಯನ್ನು ಸಲ್ಲಿಸಿದರು.
ಕೂಡಲೇ ಸ್ಪಂದಿಸಿದ ಡಾ ಮಂತರ್ ಗೌಡ ರವರು ಅನುದಾನ ಘೋಷಣೆ ಮಾಡಿದ್ದಾರೆ.ನಂತರ ಮಾತನಾಡಿದ ಡಾ. ಮಂತರ್ ಗೌಡ ರವರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ನವರು ದೇಶ ಕಂಡ ಅಪ್ರತಿಮ ಸೇನಾನಿಗಳಾಗಿದ್ದು ಅವರ ಸಾಧನೆಗಳನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ.ಈ ನಿಟ್ಟಿನಲ್ಲಿ ಈ ಮಹಾನ್ ನಾಯಕರಿಗೆ ಸಂಬಂಧಿಸಿದ ಪ್ರತಿಯೊಂದು ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಸದಾ ಇರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೂಡಾ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪ್ರಕಾಶ್ ಆಚಾರ್ಯ ಹಾಗೂ ಪ್ರಮುಖರು ಶಾಸಕರೊಂದಿಗೆ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.