- ಹೊನ್ನಾಳಿಯಲ್ಲಿ ಹಿರೇಕಲ್ಮಠ ಸ್ವಾಮೀಜಿ ಆಶೀರ್ವಚನ । ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ
ಭಗವಂತನನ್ನು ಬಿಟ್ಟರೆ ಬದುಕೇ ಇಲ್ಲ ಎನ್ನುವುದೇ ಭಾರತೀಯ ಧರ್ಮ ಸಂಸ್ಕೃತಿಯಾಗಿದೆ. ಗುರುಗಳೇ ಜಗದ ಮೂಲವಾಗಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಧರ್ಮ ಹಾಸುಹೊಕ್ಕಾಗಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಬೇಡ ಜಂಗಮ ಸಮಾಜಸೇವಾ ಸಂಘ ವತಿಯಿಂದ ಹೊನ್ನಾಳಿ ಪಟ್ಟಣದ ಕನಕ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.3 ವರ್ಷಗಳಿಂದ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವವನ್ನು ಸರ್ಕಾರದ ವತಿಯಿಂದ ಆಚರಿಸುವ ಪದ್ಧತಿ ಜಾರಿಗೊಳಿಸಿದೆ. ದೇಶದ ಇತಿಹಾಸದಲ್ಲಿ ಬಂದು ಹೋಗಿರುವ ಎಲ್ಲ ಮಹಾನ್ ಪುರುಷರು ಇಡೀ ಮನುಕುಲದ ಶ್ರೇಯೋಭಿವೃದ್ಧಿಗೆ ಧರ್ಮೋಪದೇಶ, ವಚನಗಳು, ಸಾಹಿತ್ಯಗಳ ಮೂಲಕ ಮಾರ್ಗದರ್ಶನ ಮಾಡಿದ್ದಾರೆ. ಹಾಗಾಗಿ, ಎಲ್ಲ ಮಹಾನ್ ಪುರುಷರು ಕೇವಲ ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಇದನ್ನು ಅರಿತು ನಾವು ಅವರನ್ನು ಜಾತಿಗಳಿಗೆ ಸೀಮಿತಗೊಳಿಸದೇ ಆರಾಧಿಸಬೇಕು ಎಂದು ಹೇಳಿದರು.
ಶಿಕ್ಷಕ ಕೊಟ್ರೇಶ್ ಜಿ. ಅವರು ಜಗದ್ಗುರು ರೇಣುಕಾಚಾರ್ಯ ಅವರ ಧಾರ್ಮಿಕ ಬದುಕು, ವೀರಶೈವ ಧರ್ಮ ಸೂತ್ರಗಳು, ಪಂಚಪೀಠಗಳ ಧಾರ್ಮಿಕ ಹಿರಿಮೆಗಳ ಕುರಿತು ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹೊಸಕೇರಿ ಸುರೇಶ್, ಜನಜಾಗೃತಿ ವೇದಿಕೆಯ ಬಿ.ಎಲ್.ಕುಮಾರ ಸ್ವಾಮಿ ಮಾತನಾಡಿದರು.
ಸಮಾರಂಭದಲ್ಲಿ ಗೋವಿನಕೋವಿ ಬೃಹನ್ಮಠದ ಶಿವಯೋಗಿ ವಿಶ್ವಾರಾಧ್ಯ ಮಹಾಲಿಂಗ ಹಾಲಸ್ವಾಮೀಜಿ ಹಾಗೂ ರಾಂಪುರ ಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಅತಿಥಿಗಳಾಗಿ ತಹಸೀಲ್ದಾರ್ ಪಟ್ಟರಾಜ ಗೌಡ, ಬೇಡ ಜಂಗಮ ಸಮಾಜದ ಹಿರಿಯ ಮುಖಂಡ ಎಚ್.ಎಂ. ಗಂಗಾಧರಯ್ಯ ಹಿರೇಮಠ, ಎನ್.ಕೆ. ವಿಶ್ವಾರಾಧ್ಯ ಕೋಹಳ್ಳಿಮಠ, ಬೇಡ ಜಂಗಮ ಸಮಾಜದ ಹಿರಿಯ ಮುಖಂಡ ಕೆ.ಎಂ. ಪರಮೇಶ್ವರಯ್ಯ, ಕೆ.ವಿ. ಬಸವರಾಜಯ್ಯ ಕುಳಗಟ್ಟೆ, ಸಮಾಜದ ಗೌರವಾಧ್ಯಕ್ಷ ಎಂ.ರುದ್ರಯ್ಯ, ನಾಗರಾಜಯ್ಯ ಆರ್.ಎಂ., ನ್ಯಾಮತಿ- ಹೊನ್ನಾಳಿಯ ಅನೇಕ ಮುಖಂಡರು ಭಾಗವಹಿಸಿದ್ದರು.
- - -
- - - -12ಎಚ್.ಎಲ್.ಐ1.ಜೆಪಿಜಿ: