ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ಶುಕ್ರವಾರ ನಗರದ ಸೈನಿಕ ಪಾರ್ಕ್ನಲ್ಲಿ ಆಯೋಜಿಸಿದ್ದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿ,
ಶಿವಮೊಗ್ಗದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೈನ್ಯದಲ್ಲಿ ಹೋರಾಡಿದವರು ಇದ್ದಾರೆ, ನಿವೃತ್ತ ಸೈನಿಕರಿದ್ದಾರೆ. ಅವರ ಅನುಭವಗಳನ್ನು ಹಂಚಿಕೊಳ್ಳುತ್ತಾರೆ. ಪ್ರತಿಯೊಬ್ಬ ಸೈನಿಕನ ಅನುಭವ ಕೇಳಿದಾಗ ರೋಮಾಂಚನವಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಕುಟುಂಬಗಳಿಗೆ ತುಂಬಲಾರದ ನಷ್ಟವಾಗಿದೆ. ಅವರ ಬಲಿದಾನ ಮತ್ತು ತ್ಯಾಗ ನಮಗೆಲ್ಲರಿಗೂ ಪ್ರೇರಣೆಯಾಗಬೇಕು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ದೇಶದ ಜನರಿಗೆ ಇಂದು ಮರೆಯಲಾಗದ ದಿನ ತಮ್ಮ ಶೌರ್ಯ ಪ್ರದರ್ಶನವನ್ನು ಮಾಡಿ ಕಾರ್ಗಿಲ್ ಪ್ರದೇಶವನ್ನು ಶತ್ರುಗಳ ಕೈಯಿಂದ ವಶಕ್ಕೆ ಪಡೆದ ದಿನವಾಗಿದ್ದು, ದೇಶದ ಹೆಮ್ಮೆಯ ಪ್ರತೀಕದ ದಿನವಾಗಿದೆ ಎಂದು ಹೇಳಿದರು.
ಅಗ್ನಿವೀರ್ ಯೋಜನೆ ಯಾರೂ ಏನೇ ಟೀಕೆ ಮಾಡಲಿ, ಆದರೆ ಯುವಕರಲ್ಲಿ ದೇಶಾಭಿಮಾನ ಮತ್ತು ಶಿಸ್ತನ್ನು ಬೆಳೆಸಲು ಅದು ಪರಿಣಾಮಕಾರಿಯಾಗುತ್ತದೆ. ಸಾಮಾಜಿಕ ಪ್ರೇಮ ಮೂಡಿಸುತ್ತದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಗೆ ಹಿರಿಯ ಮಾಜಿ ಸೈನಿಕರು ಭಾರಿ ಹೋರಾಟ ಮಾಡಿ, ಯುದ್ಧ ಗೆದ್ದ ಟ್ಯಾಂಕ್ನ್ನು ತಂದಿರಿಸಿದ್ದಾರೆ. ಆದರೆ, ಅದಕ್ಕೆ ಸೂಕ್ತ ಜಾಗ ಇನ್ನೂ ನೀಡಿಲ್ಲ. ಈಗ ಇನ್ನೊಂದು ಏರ್ಕ್ರಾಪ್ಟ್ ಬರುತ್ತಿದೆ. ಆದರೆ ಅದನ್ನು ತಂದು ಮೂಲೆ ಗುಂಪು ಮಾಡಬೇಡಿ, ದಯವಿಟ್ಟು ಅದಕ್ಕೆ ಸೂಕ್ತ ಸ್ಥಾನಮಾನ ನೀಡಿ, ಯುವಕರಲ್ಲಿ ದೇಶ ಪ್ರೇಮವನ್ನು ಬೆಳೆಸಿ ಎಂದು ಸೈನಿಕ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಹಿರೇಮಠ್ ಕಿವಿಮಾತು ಹೇಳಿದರು.