ಆರೋಗ್ಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ: ಗೋಪಾಲಕೃಷ್ಣ ಕಮಲಾಪುರ

KannadaprabhaNewsNetwork |  
Published : Feb 28, 2025, 12:50 AM IST
ಸ್ವಾಮಿ ವಿವೇಕಾನಂದ ಯೂತ್ ಮೂವಮೆಂಟ್ ಸಂಸ್ಥೆಯಿಂದ ಜೋಯಿಡಾದಲ್ಲಿ ಶಾಖೆ ಆರಂಭ | Kannada Prabha

ಸಾರಾಂಶ

ಸಮುದಾಯವನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಸಂಬಂಧಿಸಿದ ಸರ್ಕಾರದ ಇಲಾಖೆಗಳ ಜೊತೆಗೂಡಿ ಕೆಲಸ ಮಾಡುತ್ತಾ ಬಂದಿದ್ದೇವೆ.

ಜೋಯಿಡಾ: ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಅಭಿವೃದ್ಧಿ ಆಕಾಂಕ್ಷಿ ತಾಲೂಕು ಎಂದು ಘೋಷಣೆಯಾದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯೂ ಎಲ್.ಟಿ.ಐ ಮೈಂಡ್ ಟ್ರೀ ಸಹಕಾರದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸ್ಟೇರಿಂಗ್ ಕಮಿಟಿ ಸದಸ್ಯ ಡಾ. ಗೋಪಾಲಕೃಷ್ಣ ಕಮಲಾಪುರ ಹೇಳಿದರು.

ಅವರು ಜೋಯಿಡಾದಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಾ, ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆಯನ್ನು ಜೋಯಿಡಾದಲ್ಲಿ ನಾಲ್ಕು ವರ್ಷದ ಕಾಲಾವಧಿಗಾಗಿ ಆರೋಗ್ಯ, ಶಿಕ್ಷಣ, ಸಬಲೀಕರಣ ಮತ್ತು ಪರಿಸರ ವಿಭಾಗದಲ್ಲಿ ನೀತಿ ಆಯೋಗವು ಸೂಚಿಸಿದ ಅಭಿವೃದ್ಧಿ ಸೂಚಾಂಕಗಳ ಗುರಿ ಸಾಧಿಸಲಾಗಿದೆ. ಜೊತೆಗೆ ಸಮುದಾಯವನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಸಂಬಂಧಿಸಿದ ಸರ್ಕಾರದ ಇಲಾಖೆಗಳ ಜೊತೆಗೂಡಿ ಕೆಲಸ ಮಾಡುತ್ತಾ ಬಂದಿದ್ದೇವೆ. ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯು ಜೋಯಿಡಾ ತಾಲೂಕಿನ ಆಯ್ದ ೮ ಗ್ರಾಪಂಗಳಲ್ಲಿ ೫೨ ಹಳ್ಳಿಗಳು ೬೮೭೫ ಕುಟುಂಬಗಳು ಹಾಗೂ ೨೯,೦೪೫ ಸಾವಿರ ಜನರಿಗೆ ಸಂಸ್ಥೆಯು ತನ್ನ ಸೇವೆಯನ್ನು ನೀಡುತ್ತಿದೆ ಎಂದರು.

ಯೋಜನಾ ನಿರ್ದೇಶಕ ಚಂದ್ರಶೇಖರ ಸೋಪ್ಪಿಮಠ ಮಾತನಾಡಿದರು. ಸಂಸ್ಥೆಯ ಸಿಬ್ಬಂದಿ ಸಚಿನ ತಳೀಕರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ