ಗ್ರಾಮಗಳ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಒಲವು

KannadaprabhaNewsNetwork |  
Published : Feb 08, 2026, 01:30 AM IST
ಅವಧಿ ಪೂರೈಸುತ್ತಿರುವ ದೊಡ್ಡಾಲಗಟ್ಟ ಗ್ರಾಪಂ ಚುನಾಯಿತ ಸದಸ್ಯರಿಗೆ ಇಂದು ದೊಡ್ಡಾಲಗಟ್ಟ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಗೌರವಿಸಲಾಯಿತು. | Kannada Prabha

ಸಾರಾಂಶ

ಅವಧಿ ಪೂರೈಸುತ್ತಿರುವ ದೊಡ್ಡಾಲಗಟ್ಟ ಗ್ರಾಪಂ ಚುನಾಯಿತ ಸದಸ್ಯರಿಗೆ ಶನಿವಾರ ದೊಡ್ಡಾಲಗಟ್ಟ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಸಿರಿಗೆರೆ

ಗ್ರಾಮ ಪಂಚಾಯಿತಿ ಸದಸ್ಯರ ಸಹಕಾರ ಪ್ರೀತಿಯಿಂದ ಗ್ರಾಮಗಳ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಒಲವು ತೋರುವ ಮೂಲಕ ಪಂಚಾಯತಿ ಸಮಸ್ತ ಸಿಬ್ಬಂದಿ ಶ್ರಮಿಸಿದ್ದಾರೆ ಎಂದು ಆಲಘಟ್ಟ ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಿ.ಎಲ್.ಬಸವರಾಜ್ ತಿಳಿಸಿದರು.

ಸಿರಿಗೆರೆ ಸಮೀಪದ ಆಲಘಟ್ಟ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರಿಗೆ ಹಮ್ಮಿಕೊಳ್ಳಲಾದ ಅಭಿನಂದನ ಸಮಾರಂಭವವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ಅಭಿವೃದ್ಧಿ ಕೆಲಸ ಮಾಡುವುದಕ್ಕೆ ಆಯಾ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಹಕಾರ ಅತ್ಯಂತ ಮುಖ್ಯವಾಗಿರುತ್ತದೆ, ಆದ್ದರಿಂದ ಆಲಘಟ್ಟ ಗ್ರಾಮದ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳ ಗ್ರಾಮ ಪಂಚಾಯತಿ ಸದಸ್ಯರ ಸಹಕಾರವನ್ನು ಯಶಸ್ವಿಯಾಗಿ ನೀಡಿದ್ದಾರೆ ಎಂದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳು ಅಭಿವೃದ್ಧಿಯ ವಿಚಾರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೇ ಅವರ ಸಹಭಾಗಿತ್ವ ಅತ್ಯಂತ ಅವಶ್ಯಕವಾಗಿರುತ್ತದೆ ಅವರ ಮಾರ್ಗದರ್ಶನದ ಅಡಿಯಲ್ಲಿ ಸರ್ಕಾರದ ಅಡಿಯಲ್ಲಿ ನಿರ್ವಹಿಸುತ್ತಿರುವ ಅಧಿಕಾರಿಗಳ ಸಹಕಾರದಿಂದ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ನಾಗರಾಜಪ್ಪ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ವಿಶ್ವಾಸವನ್ನು ಗಳಿಸಿ ಅಭಿವೃದ್ಧಿಯ ಕಡೆಗೆ ದಾಪುಗಾಲು ಹಾಕಲು ಸಹಕಾರಿಯಾಗಿದೆ. ಇದರ ನಡುವೆ ಸರಕಾರದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಹ ಗ್ರಾಮ ಪಂಚಾಯಿತಿ ಹಳ್ಳಿಗಳ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಲಘಟ್ಟ, ಓಬವ್ವನಗಾತಿಹಳ್ಳಿ, ಚಿಕ್ಕಾಲಗಟ್ಟ, ವಡ್ಡರ ಸಿದ್ದನಹಳ್ಳಿ, ಕೋಣನೂರು, ಚಿಕ್ಕೇನಹಳ್ಳಿ, ಬೊಮ್ಮವ್ವನಾಗತಿಹಳ್ಳಿ ಗ್ರಾಮಗಳ ಚುನಾಯಿತ ಗ್ರಾಮ ಪಂಚಾಯತಿ ಸದಸ್ಯರಿಗೆ ಬೀಳ್ಕೊಡುಗೆ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ