ಸದೃಢ ಸಮಾಜ ನಿರ್ಮಾಣ ಗ್ರೀನ್ ಸ್ಕೂಲ್ ಸಂಕಲ್ಪ

KannadaprabhaNewsNetwork |  
Published : Jan 28, 2026, 01:45 AM IST
ಫೋಟೋ : 27 ಹೆಚ್‌ಎಸ್‌ಕೆ 1ಹೊಸಕೋಟೆ ತಾಲ್ಲೂಕಿನ ಅನಗೊಂಡನಹಳ್ಳಿ ಹೋಬಳಿಯ ಕೋಟೂರು ಗ್ರಾಮದಲ್ಲಿರುವ ದಿ ಗ್ರೀನ್ ಸ್ಕೂಲ್ ಬೆಂಗಳೂರು ಶಾಲೆಯಲ್ಲಿ ನಡೆದ ರನ್ ಅಂಡ್ ಸೈಕ್ಲೊಥಾನ್ ಕಾರ್ಯಕ್ರಮದಲ್ಲಿ ಶಾಲೆ ಅಧ್ಯಕ್ಷೆ ಉಷಾ ಅಯ್ಯರ್ ವಿಜೇತರಿಗೆ ಬಹುಮಾನ ವಿತರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಪರಿಸರ ರಕ್ಷಣೆ ಮತ್ತು ಸಾಮಾಜಿಕ ಜವಾಬ್ದಾರಿ ಮೂಲಕ ಸದೃಢ ಸಮಾಜ ನಿರ್ಮಾಣದ ದೃಢ ಸಂಕಲ್ಪದೊಂದಿಗೆ ಗಣರಾಜ್ಯೋತ್ಸವ ಪ್ರಯುಕ್ತ ರನ್ ಅಂಡ್ ಸೈಕ್ಲೋಥಾನ್ ಆಯೋಜಿಸಲಾಗಿದೆ ಎಂದು ಟಿಜಿಎಸ್‌ಬಿ ಶಾಲಾಧ್ಯಕ್ಷೆ ಉಷಾ ಅಯ್ಯರ್ ತಿಳಿಸಿದರು

ಹೊಸಕೋಟೆ: ಪರಿಸರ ರಕ್ಷಣೆ ಮತ್ತು ಸಾಮಾಜಿಕ ಜವಾಬ್ದಾರಿ ಮೂಲಕ ಸದೃಢ ಸಮಾಜ ನಿರ್ಮಾಣದ ದೃಢ ಸಂಕಲ್ಪದೊಂದಿಗೆ ಗಣರಾಜ್ಯೋತ್ಸವ ಪ್ರಯುಕ್ತ ರನ್ ಅಂಡ್ ಸೈಕ್ಲೋಥಾನ್ ಆಯೋಜಿಸಲಾಗಿದೆ ಎಂದು ಟಿಜಿಎಸ್‌ಬಿ ಶಾಲಾಧ್ಯಕ್ಷೆ ಉಷಾ ಅಯ್ಯರ್ ತಿಳಿಸಿದರು.

ತಾಲೂಕಿನ ಕೋಟೂರು ಗ್ರಾಮದ ದಿ ಗ್ರೀನ್ ಸ್ಕೂಲ್ ಬೆಂಗಳೂರು ಶಾಲೆಯಲ್ಲಿ ಆಯೋಜಿಸಿದ್ದ ರನ್ ಅಂಡ್ ಸೈಕ್ಲೊಥಾನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಉದ್ದೇಶದೊಂದಿಗೆ ಒಟ್ಟಾಗಿ ಹೆಜ್ಜೆ ಹಾಕಿದಾಗ ನಿಜವಾದ ಬದಲಾವಣೆ ಪ್ರಾರಂಭ. ಶಾಲೆಯಲ್ಲಿ ಮರುಬಳಕೆ ವಸ್ತುಗಳಿಂದ ವಿವಿಧ ಆಟಿಕೆಗಳನ್ನ ತಯಾರಿಸಿ ಅದನ್ನು ಮಾರಾಟ ಮಾಡುವ ಮೂಲಕ ಬಂದ ಆದಾಯವನ್ನು ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ನೀಡುವ ಸಾಮಾಜಿಕ ಜವಾಬ್ದಾರಿ ಹೊತ್ತಿದ್ದೇವೆ. ಸುಸ್ಥಿರತೆ ಮತ್ತು ಸಾಮಾಜಿಕ ಜವಾಬ್ದಾರಿ ಒಂದೇ ನಾಣ್ಯದ ಎರಡು ಮುಖಗಳಾಗಿವೆ ಎಂದು ವಿದ್ಯಾರ್ಥಿಗಳಿಗೆ ನಾವು ಕಲಿಸುತ್ತಿದ್ದೇವೆ ಎಂದರು.

ಬಳಗೆರೆ ಕ್ರಾಸ್ ಇಂದ ಕೋಟೂರುವರೆಗೆ ಹತ್ತು ಕಿಲೋ ಮೀಟರ್ ರನ್ ಹಾಗೂ ಸೈಕ್ಲೋಥಾನ್ ಕಾರ್ಯಕ್ರಮವನ್ನು ಗಣರಾಜ್ಯೋತ್ಸವದ ಪ್ರಯುಕ್ತ ಮಣಿಪಾಲ್ ಆಸ್ಪತ್ರೆ, ತನಿಷ್ಕ್ ವೈಟ್‌ ಫೀಲ್ಡ್ ಹಾಗೂ ನೆಕ್ಸಸ್ ವೈಟ್‌ ಫೀಲ್ಡ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಬಹುಮಾನವಾಗಿ ಟ್ರೋಫಿ ವಿತರಣೆ ಮಾಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಬಾಲ ನಟ ಪ್ರಕಾಶ್ ಗುಪ್ತ, ರನ್ನಿಂಗ್ ಕೋಚ್ ಅನಿರ್ಬನ್ ಘೋಷ್, ಮಣಿಪಾಲ್ ಆಸ್ಪತ್ರೆಯ ಸಂಯೋಜಕ ಪ್ರತಿಕ್ ಗುಪ್ತ ಸೇರಿದಂತೆ ಹಲ ಗಣ್ಯರು ಹಾಜರಿದ್ದರು.

ಫೋಟೋ : 27 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಹೋಬಳಿ ಕೋಟೂರು ಗ್ರಾಮದಲ್ಲಿರುವ ದಿ ಗ್ರೀನ್ ಸ್ಕೂಲ್ ಬೆಂಗಳೂರು ಶಾಲೆಯಲ್ಲಿ ಆಯೋಜಿಸಿದ್ದ ರನ್ ಅಂಡ್ ಸೈಕ್ಲೊಥಾನ್ ಕಾರ್ಯಕ್ರಮದಲ್ಲಿ ಶಾಲಾಧ್ಯಕ್ಷೆ ಉಷಾ ಅಯ್ಯರ್ ವಿಜೇತರಿಗೆ ಬಹುಮಾನ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ