ನೂತನ ಕ್ಯಾನ್ಸರ್‌ ಆಸ್ಪತ್ರೆ ನಿರ್ಮಾಣಕ್ಕೆ ಭೂಪೂಜೆ

KannadaprabhaNewsNetwork |  
Published : Jun 28, 2025, 12:18 AM IST
ವಿಜಯಪುರದ ಬಿ.ಎಲ್.ಡಿ.ಇ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಘಟಕಕ್ಕೆ ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಅತ್ಯಾಧುನಿಕ ತಂತ್ರಜ್ಞಾನ ಚಿಕಿತ್ಸೆ ಕಲ್ಪಿಸಲು ಬಿಎಲ್‌ಡಿಇ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಘಟಕಕ್ಕೆ ಸಂಸ್ಥೆ ಅಧ್ಯಕ್ಷ ಹಾಗೂ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಅತ್ಯಾಧುನಿಕ ತಂತ್ರಜ್ಞಾನ ಚಿಕಿತ್ಸೆ ಕಲ್ಪಿಸಲು ಬಿಎಲ್‌ಡಿಇ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಘಟಕಕ್ಕೆ ಸಂಸ್ಥೆ ಅಧ್ಯಕ್ಷ ಹಾಗೂ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಈ ಭಾಗದ ಜನ ಕ್ಯಾನ್ಸರ್‌ಗೆ ತುತ್ತಾಗಿ ಸೂಕ್ತ ಚಿಕಿತ್ಸೆಗಾಗಿ ಬೆಂಗಳೂರಿಗೆ ಮತ್ತು ಹುಬ್ಬಳ್ಳಿಗೆ ಹೋಗಬೇಕಾಗಿದೆ. ಇದೀಗ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಈ ಸೌಲಭ್ಯ ಒದಗಿಸುವ ದೃಷ್ಟಿಯಿಂದ 100 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆಗೆ ಖ್ಯಾತ ಕ್ಯಾನ್ಸರ್ ತಜ್ಞ ಡಾ.ಶೇಖರ ಪಾಟೀಲ ಅವರು ಮಾರ್ಗದರ್ಶನ ಮಾಡಲಿದ್ದಾರೆ.

ನೂತನ ಕ್ಯಾನ್ಸರ್ ಘಟಕದಲ್ಲಿ ಕಾಂಪ್ರ್ಹೆನ್ಸಿವ್ ಕ್ಯಾನ್ಸರ್ ಬ್ಲಾಕ್, ರೇಡಿಯೋಥೆರಪಿ, ಪಿಇಟಿ ಸ್ಕ್ಯಾನ್, ನ್ಯೂಕ್ಲಿಯರ್ ಮೆಡಿಸಿನ್, ರೋಗಿಗಳಿಗೆ ವಸತಿ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ (ಓಂಕೊ ಸರ್ಜರಿ), ಕ್ಯಾನ್ಸರ್ ಮೆಡಿಸಿನ್ ಒಳಗೊಂಡಿದ್ದು, ಶೀಘ್ರದಲ್ಲಿಯೇ ಸೌಲಭ್ಯ ದೊರೆಯಲಿದೆ.

ಭೂಮಿಪೂಜೆ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ, ಕುಲಪತಿ ಡಾ.ಆರ್.ಎಸ್.ಮುಧೋಳ, ಸಮಕುಲಪತಿ ಡಾ.ಅರುಣ ಇನಾಮದಾರ, ರಿಜಿಸ್ಟ್ರಾರ್ ಡಾ.ಆರ್.ವಿ.ಕುಲಕರ್ಣಿ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಆಸ್ಪತ್ರೆ ಅಧೀಕ್ಷ ಡಾ.ರಾಜೇಶ ಹೊನ್ನುಟಗಿ, ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಅಭಿಯಂತರರಾದ ಉಮೇಶ ಕರಡಿ, ರಾಜು ಮುಜುಮದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ