ಕನ್ನಡಪ್ರಭವಾರ್ತೆ ನಾಗಮಂಗಲ
ತಾಲೂಕಿನ ಮಣ್ಣಹಳ್ಳಿ ಸಮೀಪದ ಬುರುಡುಗುಂಟೆ ರಸ್ತೆಯಲ್ಲಿರುವ 9.20 ಎಕರೆ ಪ್ರದೇಶದಲ್ಲಿ 5 ಕೋಟಿ ರು. ವೆಚ್ಚದ ಲಘು ವಾಹನ ಚಾಲನಾ ತರಬೇತಿ ಕೇಂದ್ರ (ಡ್ರೈವಿಂಗ್ ಟ್ರೈನಿಂಗ್ ಟ್ರ್ಯಾಕ್) ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ವಾಹನ ಚಾಲಕರಾಗಲು ಬಯಸುವ ಯುವಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ತಾಲೂಕಿನಲ್ಲಿ ಲಘು ಮತ್ತು ಭಾರೀ ವಾಹನಗಳ ಚಾಲನಾ ತರಬೇತಿ ಕೇಂದ್ರ ನಿರ್ಮಿಸಲು ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ. ಆರಂಭದಲ್ಲಿ ಲಘು ವಾಹನಗಳ ಮತ್ತು ಮುಂದಿನ ದಿನಗಳಲ್ಲಿ ಭಾರೀ ವಾಹನಗಳ ಚಾಲನಾ ತರಬೇತಿ ಕೇಂದ್ರ ನಿರ್ಮಿಸಲಾಗುವುದು. ಇದರಿಂದ ಜಿಲ್ಲೆಯ ಬಹಳಷ್ಟು ಯುವಕರಿಗೆ ಅನುಕೂಲವಾಗುತ್ತದೆ ಎಂದರು.ವಾಹನ ಚಾಲನಾ ತರಬೇತಿ ಕೇಂದ್ರ ನಿರ್ಮಿಸಲು ತಾಲೂಕಿನ ಮಣ್ಣಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 9.20ಎಕರೆ ಪ್ರದೇಶದ ಭೂಮಿಯನ್ನು ಈಗಾಗಲೇ ಸಾರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಕೆಎಸ್ಆರ್ಟಿಸಿಯಲ್ಲಿ ಚಾಲಕರ ಹುದ್ದೆಗಳ ನೇಮಕಾತಿ ನಿರಂತರವಾಗಿರುತ್ತದೆ. ಸರಿಯಾದ ರೀತಿಯಲ್ಲಿ ತರಬೇತಿ ಪಡೆದುಕೊಂಡಿದ್ದಲ್ಲಿ ಮಾತ್ರ ಕೆಎಸ್ಆರ್ಟಿಸಿ ಅಥವಾ ಖಾಸಗಿ ವಾಹನಗಳ ಚಾಲಕರಾಗಿ ಆಯ್ಕೆಯಾಗಿ ಉದ್ಯೋಗ ಪಡೆದುಕೊಳ್ಳಬಹುದು.
ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಬಿ.ಎಸ್.ಸತೀಶ್, ಎಆರ್ಟಿಒ ಹೊನ್ನೇಗೌಡ, ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸತೀಶ್, ಸಹಬಾಜ್ ಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಂ.ಪ್ರಕಾಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಿಣ್ಯ ವೆಂಕಟೇಶ್, ಮುಖಂಡರಾದ ಸುನಿಲ್ ಲಕ್ಷ್ಮಿಕಾಂತ್, ಕೊಣನೂರು ಹನುಮಂತು, ಡಿ.ಕೃಷ್ಣೇಗೌಡ, ಹೊಣಕೆರೆ ಬಸವರಾಜು, ಆರ್.ಕೃಷ್ಣೇಗೌಡ, ಜವರಪ್ಪ ಸೇರಿದಂತೆ ಹಲವರು ಇದ್ದರು.